News Karnataka Kannada
Wednesday, May 01 2024
ಮಂಗಳೂರು

ಬಂಟ್ವಾಳ: ಭಾರತೀಯ ಕಮ್ಯುನಿಸ್ಟ್ ಪಕ್ಷದ ದ.ಕ ಮತ್ತು ಉಡುಪಿ ಜಿಲ್ಲಾ 24ನೇ ಸಮ್ಮೇಳನಕ್ಕೆ ಚಾಲನೆ

Bantwal: The 24th district conference of the Communist Party of India (CPI) has been inaugurated in Dakshina Kannada and Udupi districts.
Photo Credit :

ಬಂಟ್ವಾಳ, ಆ.27: ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ)ದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ 24ನೇ ಸಮ್ಮೇಳನಕ್ಕೆ ಬಂಟ್ವಾಳ ಬೈಪಾಸ್ ನಲ್ಲಿರುವ ಕಾ. ಎ.ಶಾಂತಾರಾಮ ಪೈ ಸ್ಮಾರಕ ಭವನದಲ್ಲಿ ಶನಿವಾರ ಬೆಳಗ್ಗೆ ಧ್ವಜಾರೋಹಣ ಮೂಲಕ ಚಾಲನೆ ನೀಡಲಾಯಿತು.

ಮೂರು ದಿನಗಳ ಕಾಲ ನಡೆಯಲಿರುವ ಸಮ್ಮೇಳನದ ಧ್ವಜಾರೋಹನವನ್ನು ಹಿರಿಯ ಸಿಪಿಐ ಮುಖಂಡ ಎ.ಪ್ರಭಾಕರ ರಾವ್ ನೆರವೇರಿಸಿದರು. ಬಳಿಕ ನಡೆದ ಪ್ರತಿನಿಧಿ ಸಮಾವೇಶವನ್ನು ಸಿಪಿಐ ರಾಜ್ಯ ಕಾರ್ಯದರ್ಶಿ ಕಾ. ಸಾತಿ ಸುಂದರೇಶ್ ಉದ್ಘಾಟಿಸಿ ಮಾತನಾಡಿದರು.

ಪ್ರತಿನಿಧಿ ಸಭೆಯ ಅಧ್ಯಕ್ಷ ಮಂಡಳಿಯ ಪ್ರಮುಖರಾದ ಪ್ರೇಮನಾಥ ಕೆ., ರತಿ ಎಸ್. ಭಂಡಾರಿ, ಎಂ.ಪಿ.ರಾವ್ ಹಾಗೂ ಅತಿಥಿಗಳಾಗಿ ಸಿಪಿಐ ದ.ಕ. ಮತ್ತು ಉಡುಪಿ ಜಿಲ್ಲಾ ಕಾರ್ಯದರ್ಶಿ ವಿ.ಕುಕ್ಯಾನ್, ಜಿಲ್ಲಾ ಸಹ ಕಾರ್ಯದರ್ಶಿ ವಿ.ಸೀತರಾಮ್, ಸಿಪಿಐ ರಾಜ್ಯ ಮಂಡಳಿ ಸದಸ್ಯ ಕಾ. ಬಿ.ಶೇಖರ್, ಸಿಪಿಐ ಮಂಗಳೂರು ತಾಲೂಕು ಕಾರ್ಯದರ್ಶಿ ಎಂ.ಕರುಣಾಕರ್, ಭಾರತೀಯ ರಾಜ್ಯ ಮಹಿಳಾ ಒಕ್ಕೂಟ ಕಾರ್ಯದರ್ಶಿ ಭಾರತಿ ಪ್ರಶಾಂತ್, ಸಮ್ಮೇಳನದ ಪೂರ್ವ ಸಿದ್ಧತಾ ಸಮಿತಿ ಸಂಚಾಲಕ ಬಿ.ಬಾಬು ಭಂಡಾರಿ, ಸಿಪಿಐ ಬಂಟ್ವಾಳ ತಾಲೂಕು ಕಾರ್ಯದರ್ಶಿ ಸುರೇಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ಸಿಪಿಐ ಬಂಟ್ವಾಳ ತಾಲೂಕು ಕಾರ್ಯದರ್ಶಿ ಸುರೇಶ್ ಕುಮಾರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು