Categories: ಮಂಗಳೂರು

ಬಂಟ್ವಾಳ: ಸೌಹಾರ್ದಯುತ ಬಂಟ್ವಾಳ ನಿರ್ಮಾಣ ಈ ಬಾರಿಗೆಯ ಗೆಲುವಿಗೆ ಕಾರಣವಾಗಿದೆ

ಬಂಟ್ವಾಳ: ಶ್ರದ್ಧೆ, ನಿಷ್ಠೆಯಿಂದ ದುಡಿದ ಪರಿಣಾಮ ಹಾಗೂ ಕಳೆದ ೫ ವರ್ಷಗಳ ಅಭಿವೃದ್ಧಿ ಕಾರ್ಯ, ಶಾಂತಿ, ಸೌಹಾರ್ದಯುತ ಬಂಟ್ವಾಳ ನಿರ್ಮಾಣ ಈ ಬಾರಿಗೆಯ ಗೆಲುವಿಗೆ ಕಾರಣವಾಗಿದೆ ಎಂದು ಬಂಟ್ವಾಳದ ವಿಜೇತ ಬಿಜೆಪಿ ಅಭ್ಯರ್ಥಿ, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.

ಗೆಲುವು ಸಾಧಿಸಿದ ಬಳಿಕ ಸುರತ್ಕಲ್ ಎನ್ ಐ ಟಿಕೆ ಯಲ್ಲಿ ಚುನಾಯಿತ ಶಾಸಕ ಪ್ರಮಾಣ ಪತ್ರ ಸ್ವೀಕರಿಸಿ, ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಬಿ.ಸಿ.ರೋಡಿನ ಪಕ್ಷದ ಕಚೇರಿಗೆ ಆಗಮಿಸಿ ಸುದ್ದಿಗಾರರ ಜೊತೆ ಮಾತನಾಡಿದರು.

ವಿರೋಧ ಪಕ್ಷದಲ್ಲಿದ್ದುಕೊಂಡು ಕೆಲಸ ಮಾಡಬೇಕಾದ ಸ್ಥಿತಿ ಇದ್ದು, ಸಿಕ್ಕ ಅವಕಾಶಗಳನ್ನು ಉಪಯೋಗಿಸಿಕೊಂಡು ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಿದ್ದೇನೆ.

ಈ ಬಾರಿ ವಿರೋಧ ಪಕ್ಷದಲ್ಲಿದ್ದೇನೆ, ಆಡಳಿತ ಪಕ್ಷದಲ್ಲಿದ್ದರೆ ಹಿಂದಿಗಿಂತ ಹೆಚ್ಚಿನ ಅಭಿವೃದ್ಧಿ ಮಾಡುವುದಕ್ಕೆ ಅವಕಾಶವಾಗುತ್ತಿತ್ತು. ಆದರೂ ಗರಿಷ್ಠ ಪ್ರಯತ್ನ ಮಾಡಿ ಅನುದಾನ ತಂದು ಅಭಿವೃದ್ಧಿ ಕಾರ್ಯ ಮಾಡಲಿದ್ದೇನೆ. ಜತೆಗೆ ಬಂಟ್ವಾಳದಲ್ಲಿ ಬಿಜೆಪಿಯಿಂದ ೨ನೇ ಬಾರಿಗೆ ಗೆದ್ದ ಮೊದಲ ಶಾಸಕನಾಗಿರುವುದಕ್ಕೆ ಹೆಚ್ಚು ಸಂತೋಷ ಪಡುತ್ತೇನೆ ಎಂದರು.

ನನ್ನ ಗೆಲುವಿನಲ್ಲಿ ಕಾರ್ಯಕರ್ತರ ಶ್ರಮ ಹಾಗೂ ಮತದಾರರ ಸಹಕಾರ ಪೂರಕವಾಗಿದ್ದು, ಕಾರ್ಯಕರ್ತರು ಹಾಗೂ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.

ಬಿಜೆಪಿ ಮಂಡಲ ಅಧ್ಯಕ್ಷ ದೇವಪ್ಪ ಪೂಜಾರಿ, ಬೂಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಪ್ರಮುಖರಾದ ಹರಿಕೃಷ್ಣ ಬಂಟ್ವಾಳ, ಸುಲೋಚನಾ ಜಿಕೆ ಭಟ್ ಮೊದಲಾದವರು ಉಪಸ್ಥಿತರಿದ್ದರು. ಕೈಕಂಬ ಪೊಳಲಿ ದ್ವಾರದ ಬಳಿಯಿಂದ ಶಾಸಕ ರಾಜೇಶ್ ನಾಯ್ಕ್ ಅವರನ್ನು ಮೆರವಣಿಗೆಯ ಮೂಲಕ ಸ್ವಾಗತ ಕೋರಿ ಬರಮಾಡಿಕೊಳ್ಳಲಾಯಿತು.

Ashika S

Recent Posts

ಸಿಡಿಲು ಬಡಿದು 10 ದಿನದ ಹಿಂದೆ ಮದುವೆಯಾಗಿದ್ದ ಯುವಕ ಮೃತ್ಯು

ಹತ್ತು ದಿನದ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ…

15 mins ago

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡ್ಗಿಚ್ಚು

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದಂತೆಯೇ ಅರಣ್ಯಗಳಲ್ಲಿ ಕಾಡ್ಗಿಚ್ಚಿನ ಭಯವೂ ಶುರುವಾಗಿದ್ದು, ಇದೀಗ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ…

8 hours ago

ಗುಂಡ್ಲುಪೇಟೆಯಲ್ಲಿ ಮಳೆಗೆ ನೆಲಕ್ಕುರುಳಿದ ಮರಗಳು

ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಮಳೆ ಗಾಳಿಗೆ ಬಾಳೆ ಸೇರಿದಂತೆ ಗಿಡ ಮರಗಳು ನೆಲಕ್ಕುರುಳಿವೆ. ಸುಮಾರು ಒಂದು ಗಂಟೆಗಳ ಕಾಲ…

8 hours ago

ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಪದವೀಧರರಿಗೆ ಅವಕಾಶ

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ…

9 hours ago

ಹಿಂದೂ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ಅನ್ಯ ಕೋಮಿನ ಯುವಕನ ಬಂಧನ

ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಹುಬ್ಬಳ್ಳಿಯ ನವನಗರ…

9 hours ago

ಮೈಸೂರಿಗೆ ತಂಪೆರೆದ ವರುಣ, ಸೃಷ್ಟಿಸಿದ್ದು ಹತ್ತಾರು ಅವಾಂತರ!

ಬಿರು ಬಿಸಿಲಿನಿಂದ ಬಸವಳಿದಿದ್ದ ಸಾಂಸ್ಕೃತಿಕ ನಗರಿ ಜನರಿಗೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ನಗರಕ್ಕೆ ತಂಪೆರೆಯಿತಾದರೂ…

9 hours ago