ಬಂಟ್ವಾಳ: ಪುದು ಗ್ರಾಮ ಪಂಚಾಯತ್ ಅಧಿಕಾರ ಕಾಂಗ್ರೆಸ್ ಬೆಂಬಲಿತ ಸದಸ್ಯರ ಪಾಲಾಗುತ್ತದೆ ಅದರಲ್ಲಿ ಯಾವುದೇ ಸಂಶಯವಿಲ್ಲ, ಎಲ್ಲಾ ವಾರ್ಡ್ ಗಳಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರನ್ನು ಆಯ್ಕೆ ಮಾಡುವಲ್ಲಿ ಗ್ರಾಮದ ಜನತೆಯ ಸಹಕಾರ ಬೇಕು ಎಂದು ಉಳ್ಳಾಲ ಶಾಸಕ, ವಿರೋಧ ಪಕ್ಷದ ಉಪನಾಯಕ ಯು.ಟಿ.ಖಾದರ್ ಹೇಳಿದರು.
ಅವರು ಫೆ. 25 ರಂದು ನಡೆಯುವ ಪುದು ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನೆಲೆಯಲ್ಲಿ ನಡೆದ ಚುನಾವಣಾ ಪ್ರಚಾರದ ಸಭೆಯಲ್ಲಿ ಮಾತನಾಡಿದರು.
ಅಧಿಕಾರ ಇದ್ದರೆ ಮಾತ್ರ ಗ್ರಾಮದ ಅಭಿವೃದ್ಧಿ ಮಾಡಲು ಸಾಧ್ಯವಾಗುತ್ತದೆ,ಕಳೆದ ಐದು ವರ್ಷಗಳಲ್ಲಿ ಪುದು ಗ್ರಾಮಪಂಚಾಯತ್ ಜನಪರವಾದ ಉತ್ತಮ ಆಡಳಿತವನ್ನು ನೀಡಿದೆ ಎಂಬ ವಿಶ್ವಾಸವಿದೆ.
ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಹಾಗಾಗಿ ಜನ ಮತ್ತೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಮತ ನೀಡುತ್ತಾರೆ ಎಂಬ ವಿಶ್ವಾಸವಿದೆ.
ಮುಂದಿನ ಚುನಾವಣೆಯ ದೃಷ್ಟಿಯಿಂದ ಗ್ರಾಮ ಪಂಚಾಯತ್ ಚುನಾವಣೆಯನ್ನು ಕೇವಲವಾಗಿ ಕಾಣುವ ಪ್ರಶ್ನೆಯಿಲ್ಲ. ಗ್ರಾಮಪಂಚಾಯತ್ ಆಡಳಿತ ಮುಂದಿನ ಚುನಾವಣೆಗೆ ದಿಕ್ಸೂಚಿಯಾಗಲಿದೆ. ಅ ನಿಟ್ಟಿನಲ್ಲಿ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಉಮ್ಮರ್ ಫಾರೂಕ್ ಪರಂಗಿಪೇಟೆ, ರಮ್ಲಾನ್ ಮಾರಿಪಳ್ಳ ಚಂದ್ರಹಾಸ ಕರ್ಕೇರ , ಮಮತಾ ಗಟ್ಟಿ , ಪ್ರಶಾಂತ್ ಕಾಜವ, ಹಾಸೀಫ್ ಇಕ್ಬಾಲ್ ದರ್ಬಾರ್, ಜಬ್ಬಾರ್ ಮಾರಿಪಳ್ಕ,,ಇಸ್ಮಾಯಿಲ್ , ಅಬುಬಕ್ಕರ್ ಹತ್ತನೇ ಮೈಲಿಕಲ್ಲು, ಪದ್ಮನಾಭ ನರಿಂಗಾನ, ಶಿವಪ್ಪ ಅಂಚನ್, ಎನ್.ಕೆ.ಮಹಮ್ಮದ್, ಇಕ್ಬಾಲ್ ಸುಜೀರ್, ಅಹಮ್ಮದ್ ದಿಲ್, ಲತೀಫ್ ಕುಂಜತ್ಕಲ, ಇಸ್ಮಾಯಿಲ್ ಐ.ಕೆ, ಚಂದಪ್ಪ ಪೂಜಾರಿ, ಹಕೀಂ ಮಾರಿಪಳ್ಳ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…
ಪುಟಾಣಿ ಕಲಾವಿದೆ ಹತ್ತು ವರ್ಷದ ಕುಮಾರಿ ಗಂಗಾ ಶಶಿಧರ್ ಬಳಗದ ವಯೋಲಿನ್ ವಾದನ ಕಛೇರಿ ಕಾರ್ಯಕ್ರಮ ಉಡುಪಿಯ ಶ್ರೀ ಕೃಷ್ಣಮಠದ…
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಹುದಿನದ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರರಿಗೆ ಬಸ್ ಪಾಸ್ ನೀಡುವ ಸಂಬಂಧ ಇತ್ತಿಚೆಗೆ ದಾವಣಗೆರೆಯಲ್ಲಿ ನಡೆದ…
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ…
“ಅಧ್ಯಾಪಕರುಗಳ ಪ್ರೋತ್ಸಾಹ ಮತ್ತು ಬೆಂಬಲವೇ ಇವತ್ತಿನ ಈ ದಿನದ ಯಶಸ್ಸು ಮತ್ತು ಇಲ್ಲಿಯ ಕಾರ್ಯಕ್ರಮಗಳೇ ಈ ಕಾಲೇಜಿನ ಮಹತ್ವವನ್ನು ಸಾರುತ್ತಿದೆ…
ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ…