News Karnataka Kannada
Saturday, May 11 2024
ಮಂಗಳೂರು

ಬಂಟ್ವಾಳ: ಮಕ್ಕಳಿಗೆ ಚಿಕ್ಕವಯಸ್ಸಿನಲ್ಲಿ ಸಿಗುವ ಸಾಂಸ್ಕೃತಿಕ ಅವಕಾಶ ಆತ್ಮವಿಶ್ವಾಸ ಬೆಳೆಸುತ್ತದೆ

Bantwal: The cultural opportunity that children get at an early age instills confidence in them.
Photo Credit : By Author

ಬಂಟ್ವಾಳ: ಮಕ್ಕಳಿಗೆ ಚಿಕ್ಕವಯಸ್ಸಿನಲ್ಲಿ ಸಿಗುವ ಸಾಂಸ್ಕೃತಿಕ ಅವಕಾಶಗಳು ಅವರಲ್ಲಿ ಹೊಸ ಬಗೆಯ ಆತ್ಮವಿಶ್ವಾಸವನ್ನು ಬೆಳೆಸುತ್ತದೆ ಎಂದು ಹಿಂ.ವರ್ಗಗಳ ಇಲಾಖೆಯ ಕ‌ಲ್ಯಾಣಾಧಿಕಾರಿ ಬಿಂಧ್ಯಾ ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ತಾಲೂಕು ಬಾಲಭವನ ಸಮಿತಿಯ ಆಶ್ರಯದಲ್ಲಿ ಬಿ.ಸಿ.ರೋಡಿನ‌ ಸ್ತ್ರೀಶಕ್ತಿ ಸಭಾಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನಡೆದ ದೇಶಭಕ್ತಿಗೀತೆ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ಹಿತದೃಷ್ಟಿಗೆ ಪೂರಕವಾದ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿರುವುದು ಸಂತಸ ತಂದಿದೆ ಎಂದರು.

ಶಿಕ್ಷಣ ಸಂಯೋಜಕಿ‌ ಸುಜಾತ ಕುಮಾರಿ ಮಾತನಾಡಿ, ಕೊರೋನಾ ಕಾರಣದಿಂದ ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿಗಳು ಅನೇಕ ಸಾಂಸ್ಕೃತಿಕ ಅವಕಾಶಗಳಿಂದ ವಂಚಿತರಾಗಿದ್ದರು, ಇದೀಗ ಮತ್ತೆ ಉತ್ತಮ ವಾತಾವರಣ ಸೃಷ್ಡಿಯಾಗಿರುವುದು ಸಮಾಧಾನಕರ ಸಂಗತಿ ಎಂದರು.

ಸಂಪನ್ಮೂಲ ವ್ಯಕ್ತಿಗಳಾದ ಬಿ.ಆರ್.ಸಿ. ಸುರೇಖಾ, ಕೃಷ್ಣಾಚಾರ್ಯ, ಎಸಿಡಿಪಿಓ ಶೀಲಾವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಂಟ್ವಾಳ ಸಿಡಿಪಿಓ ಗಾಯತ್ರಿ ಕಂಬಳಿ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಮೇಲ್ವಿಚಾರಕಿ ಲೀಲಾವತಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ತಾಲೂಕಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು