Categories: ಮಂಗಳೂರು

ಬಂಟ್ವಾಳ: ಗ್ರಾ.ಪಂ.ಚುನಾವಣೆಗೆ ಇಲಾಖೆ ಸಜ್ಜು

ಬಂಟ್ವಾಳ: ಫೆ.25 ರಂದು ಪುದು ಗ್ರಾ.ಪಂ‌.ನಲ್ಲಿ ನಡೆಯಲಿರುವ ಚುನಾವಣೆಯ ಹಿನ್ನೆಲೆಯಲ್ಲಿ ಬಿಸಿರೋಡು ಆಡಳಿತ ಸೌಧದಿಂದ ಅಧಿಕಾರಿಗಳು ಬೂತ್ ಕಡೆಗೆ ಮತಪೆಟ್ಟಿಗೆ ಜೊತೆ ಹೆಜ್ಜೆ ಹಾಕಿದರು.

ಅವಧಿ ಮುಗಿದ ಪುದು ಗ್ರಾ.ಪಂ.ನಲ್ಲಿ 10 ವಾರ್ಡ್ ಗಳಲ್ಲಿ 34 ಸದಸ್ಯ ಸ್ಥಾನಗಳಿಗೆ 99 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ನಾಳೆ ಅಭ್ಯರ್ಥಿಗಳ ಭವಿಷ್ಯ ನಿರ್ಣಯವಾಗಲಿದೆ.

ಇದರ ಜೊತೆ ವಿವಿಧ ಕಾರಣಕ್ಕಾಗಿ ತೆರವಾದ ನೆಟ್ಲಮುಡ್ನೂರು ಹಾಗೂ ಅನಂತಾಡಿ ಗ್ರಾಮಪಂಚಾಯತ್ ನಲ್ಲಿ ಎರಡು ಸದಸ್ಯ ಸ್ಥಾನಗಳಿಗೆ ತಲಾ ನಾಲ್ಕು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಪುದುವಿನಲ್ಲಿ 10 ಬೂತ್ ಗಳಿದ್ದು ಒಂದು ಆಕ್ಸಿಲರಿ ಬೂತ್ ಇದೆ. ಅನಂತಾಡಿ ಮತ್ತು ನೆಟ್ಲಮುಡ್ನೂರಿನಲ್ಲಿ ಉಪಚುನಾವಣೆ 13 ಬೂತ್, ಪ್ರತಿ ಬೂತ್ ಗೂ ಐದೈದು ಸಿಬ್ಬಂದಿಗಳನ್ನು ಕಳುಹಿಸಲಾಗಿದೆ.

ಒಟ್ಟು 65 ಸಿಬಂದಿಗಳನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ಈ ಬಾರಿ ಮತಪತ್ರದ ಮೂಲಕ ಚುನಾವಣೆ ನಡೆಯಲಿದ್ದು ಬೆಳಿಗ್ಗೆ 7 ರಿಂದ ಸಂಜೆ 5 ರ ತನಕ ಮತದಾನ ನಡೆಯಲಿದೆ. ಪುದು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಒಟ್ಟು 13000 ಮತದಾರರು ಇದ್ದು 99 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಳೆ ಮತದಾನ ನಡೆದ ಬಳಿಕ ಮತಪೆಟ್ಟಿಗೆಯನ್ನು ಅಡಳಿತ ಸೌಧದ ಕಚೇರಿಯಲ್ಲಿ ಭದ್ರವಾಗಿ ಇಡಲಾಗುತ್ತದೆ.

Ashika S

Recent Posts

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

5 mins ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

28 mins ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

55 mins ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

1 hour ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

1 hour ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

1 hour ago