News Karnataka Kannada
Monday, April 29 2024
ಮಂಗಳೂರು

ಬಂಟ್ವಾಳ: ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಬಂಟ್ವಾಳ ತಾಲೂಕಿನಿಂದ ಹೊರೆಕಾಣಿಕೆ

The international cultural jamboree from Bantwal taluk
Photo Credit : By Author

ಬಂಟ್ವಾಳ: ಮೂಡುಬಿದಿರೆಯಲ್ಲಿ ಆಳ್ವಾಸ್ ನ ಡಾ. ಎಂ.ಮೋಹನ ಆಳ್ವ ನೇತೃತ್ವದಲ್ಲಿ ಡಿ.21ರಿಂದ 27ರವರೆಗೆ ನಡೆಯಲಿರುವ ಸೌಟ್ ಮತ್ತು ಗೈಡ್ಸ್ ನ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಬಂಟ್ವಾಳ ತಾಲೂಕಿನಿಂದ ಹೊರೆಕಾಣಿಕೆಯ ಬೃಹತ್ ಮೆರವಣಿಗೆಗೆ ಒಡಿಯೂರು ಕ್ಷೇತ್ರದ ಸಾಧ್ವಿ ಶ್ರೀಮಾತಾನಂದಮಯಿ ಅವರು‌ಭಾನುವಾರ ಸಂಜೆ ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಅವರು, ಡಾ. ಮೋಹನ ಆಳ್ವ ಅವರ ಕ್ರಿಯಾಶೀಲತೆಯಿಂದಾಗಿ ಆಳ್ವಾಸ್ ನಲ್ಲಿ ಇಂಥದ್ದೊಂದು ದೊಡ್ಡ ಮಟ್ಟದ ಕಾರ್ಯಕ್ರಮ ನಡೆಯಲು ಸಾಧ್ಯವಾಗಿದ್ದು, ಎಲ್ಲರ ಸಹಕಾರ ದೊರಕಿರುವ ಹಿನ್ನೆಲೆಯಲ್ಲಿ ಜಾಂಬೂರಿ ಯಶಸ್ವಿಯಾಗಿ ನಡೆಯಲಿದೆ ಎಂದು ಶುಭ ಹಾರೈಸಿದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಉಳಿಪ್ಪಾಡಿ ಮಾತನಾಡಿ, ಈಗಾಗಲೇ ಕಾರ್ಯಕ್ರಮಕ್ಕೆ ರಾಜ್ಯ ಸರಕಾರ ಹತ್ತು ಕೋಟಿ ರೂಗಳನ್ನು ಒದಗಿಸಿದ್ದು, ಯಶಸ್ವಿಯಾಗಿ ನೆರವೇರಿಸಲು ಸರ್ವ ಸಹಕಾರ ನೀಡಿದೆ ಎಂದರು.

ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಭಾರತಕ್ಕೆ ಅಂತಾರಾಷ್ಟ್ರೀಯ ಜಾಂಬೂರಿ ಆಯೋಜನೆಯಾಗಿದ್ದು, ಅದರಲ್ಲೂ ಮೂಡುಬಿದಿರೆಯಲ್ಲಿ ನಡೆಯುತ್ತಿರುವುದು ವಿಶೇಷ ಎಂದರು.

ಈ ಸಂದರ್ಭ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮಾಜಿ ಶಾಸಕರಾದ ಕೆ.ಪದ್ಮನಾಭ ಕೊಟ್ಟಾರಿ, ಎ.ರುಕ್ಕಯ ಪೂಜಾರಿ, ಜನಜಾಗೃತಿ ವೇದಿಕೆ ಅಧ್ಯಕ್ಷ ರೊನಾಲ್ಡ್ ಡಿಸೋಜ, ತಾಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ತಾಲೂಕು ಸಮಿತಿ ಕಾರ್ಯಾಧ್ಯಕ್ಷ ಪ್ರಹ್ಲಾದ್ ಶೆಟ್ಟಿ ಜಡ್ತಿಲ, ಆರ್ಥಿಕ ಸಮಿತಿ ಸಂಚಾಲಕ ಜಗನ್ನಾಥ ಚೌಟ ಬದಿಗುಡ್ಡೆ, ಹೊರೆಕಾಣಿಕೆ ಸಮಿತಿ ಸಂಚಾಲಕ ಚಂದ್ರಹಾಸ ಶೆಟ್ಟಿ ರಂಗೋಲಿ, ಪ್ರಧಾನ ಕಾರ್ಯದರ್ಶಿ ಬಿ.ಮಹಮ್ಮದ್ ತುಂಬೆ, ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಜಯಾನಂದ, ಫರಂಗಿಪೇಟೆ ಸೇವಾಂಜಲಿ ಟ್ರಸ್ಟಿ ಕೃಷ್ಣಕುಮಾರ್ ಪೂಂಜ, ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ ಸಹಿತ ವಿವಿಧ ಸಂಘ, ಸಂಸ್ಥೆಗಳು, ರಾಜಕೀಯ ಪಕ್ಷಗಳ ಪ್ರಮುಖರು ಉಪಸ್ಥಿತರಿದ್ದರು. ಕಿಶೋರ್ ಭಂಡಾರಿ ಕಾರ್ಯಕ್ರಮ ನಿರ್ವಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು