ಬಂಟ್ವಾಳ: ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ನಿ)ಇದರ ಬೆಳ್ಳಿ ಹಬ್ಬದ ಸಮಾರಂಭವು ಬಂಟ್ವಾಳದ ಬಂಟರ ಭವನ ತುಂಬೆಯಲ್ಲಿ ಅ2 ರಂದು ಆದಿತ್ಯವಾರ ಸಂಜೆ 5.30ಯಿಂದ ನಡೆಯಲಿದೆ.
ಈ ಕಾರ್ಯಕ್ರಮವನ್ನು ಮಾನ್ಯ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಇವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ (ನಿ) ಇದರ ಅಧ್ಯಕ್ಷ ಜೀವನ್ ಲೋಲ್ಡ್ ಪಿಂಟೊ ವಹಿಸಲಿದ್ದಾರೆ. ಮಂಗಳೂರಿನ ವಿಶ್ರಾಂತ ಧರ್ಮಾಧಿಕಾರಿಗಳು ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ ಡಿಸೋಜ ಆಶೀರ್ವಚನ ನುಡಿಗಳನ್ನು ಹೇಳಲಿದ್ದಾರೆ.
ಕಾರ್ಯಕ್ರಮದ ವಿಶೇಷ ಘನ ಉಪಸ್ಥಿತಿಯನ್ನು ಲೋಕಸಭಾ ಸದಸ್ಯರು ಫ್ರಾನ್ಸಿಸ್ಕೊ ಸರ್ಡಿನ್ಹಾ ಗೌರವ ಉಪಸ್ಥಿತಿಯನ್ನು ದ.ಕ.ಜಿ.ಕೆ.ಸ ಬ್ಯಾಂಕ್ ಮಂಗಳೂರಿನ ಡಾ. ಎಮ್. ಎನ್ ರಾಜೇಂದ್ರ ಕುಮಾರ್ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ದ.ಕ.ಜಿಲ್ಲೆಯ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಜಾಲತಾಣ ಬಿಡುಗಡೆ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕ ರಾಜೇಶ್ ನಾಯಕ್, ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಯು.ಟಿ.ಖಾದರ್, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ, ಕರ್ನಾಟಕ ಸರ್ಕಾರದ ಮಾಜಿ ಸಚಿವ ಬಿ.ರಮಾನಾಥ ರೈ, ಮಂಗಳೂರು ಧರ್ಮಪ್ರಾಂತ್ಯದ ವಿಕಾರ್ ಜನರಲ್ ಅತೀ ವಂದನೀಯ ಮ್ಯಾಕ್ಸಿವ್ ನೊರೊನ್ಹಾ, ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ (ನಿ)ದ ಸ್ಥಾಪಕ ಅಧ್ಯಕ್ಷ ಲಿಗೋರಿ ಲೋಬೋ, ಮಂಗಳೂರಿನ ಸಹಕಾರ ಸಂಘಗಳ ಉಪನಿಬಂಧಕರು ಪ್ರವೀಣ್ ಬಿ.ನಾಯಕ್, ಮಂಗಳೂರಿನ ಸಹಕಾರ ಸಂಘಗಳ ಸಹಾಯಕ ಉಪನಿಬಂಧಕರು ಸುಧೀರ್ ಕುಮಾರ್ ಜೆ ಸಹಿತ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ.
ಸಂಜೆ 5.30ಯಿಂದ ಬಲೇ ತೆಲಿಪಾಲೆ ಖ್ಯಾತಿಯ ಉಮೇಶ್ ಮಿಜಾರ್ ತಂಡದಿಂದ ಕಾಮಿಡಿ ಶೋ ಹಾಗೂ ರಾತ್ರಿ 9ರಿಂದ ಇಟ್ಬಾಲ್ ಮತ್ತು ರೂಪಾ ಪ್ರಕಾಶ್ ಮಹಾದೇವನ್ ತಂಡದಿಂದ ಸಂಗೀತ ರಸಮಂಜರಿ ನಡೆಯಲಿದೆ.