News Karnataka Kannada
Tuesday, April 30 2024
ಮಂಗಳೂರು

ಬಂಟ್ವಾಳ: ತಾಲೂಕಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್

Tight security arrangements have been made across the taluk.
Photo Credit : By Author
ಬಂಟ್ವಾಳ:  ಸುಳ್ಯ ಹಾಗೂ ಸುರತ್ಕಲ್ ನಲ್ಲಿ ಸರಣಿ ಹತ್ಯೆ ನಡೆದಿರುವ ಹಿನ್ನೆಲೆಯಲ್ಲಿ  ಬಂಟ್ವಾಳ‌ ತಾಲೂಕಿನಲ್ಲೂ ಬಿಗಿ  ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ತಾಲೂಕಿನ ಬಂಟ್ವಾಳ, ಬಂಟ್ವಾಳ ಗ್ರಾಮಾಂತರ ಹಾಗೂ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಹಾಸನ ಎಸ್ಪಿ ಹರಿರಾಂ ಶಂಕರ್ ಅವರು ಬಂಟ್ವಾಳದಲ್ಲಿ ಮೊಕ್ಕಾಂ ಹೂಡಿದ್ದು, ಚಿಕ್ಕಮಗಳೂರು ಅಡಿಷನಲ್ ಎಸ್ಪಿ ಸಹಿತ ಚಿಕ್ಕಮಗಳೂರು , ಕಾರಾವಾರ  ಹಾಗೂ ಬೆಳ್ತಂಗಡಿಯಿಂದ ಹೆಚ್ಚುವರಿ ಪೊಲೀಸರನ್ನು ಕರೆಯಿಸಲಾಗಿದೆ.
ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಕಾನೂನು ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ವ್ಯಾಪಾರ ವಹಿವಾಟು ಬಂದ್ ಮಾಡಿ ಆದೇಶಿಸಿದ ಹಿನ್ನೆಲೆಯಲ್ಲಿ ಪೊಲೀಸರು ಸಂಜೆ 6 ಗಂಟೆಯ ಸುಮಾರಿಗೆ ಎಲ್ಲಾ ವ್ಯಾಪಾರ ವಹಿವಾಟುಗಳನ್ನು ಬಂದ್ ಮಾಡಿಸಿದರು.
29ರ ಮಧ್ಯರಾತ್ರಿಯಿಂದ ಆಗಸ್ಟ್ 6ರ ಮಧ್ಯರಾತ್ರಿವರೆಗೆ ಸೆ.144ರನ್ವಯ ನಿಷೇಧಾಜ್ಞೆ ವಿಧಿಸಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಬಂಟ್ವಾಳದ ಪೊಲೀಸರು ಬಿ.ಸಿ.ರೋಡ್ ನಲ್ಲಿ ಸಾರ್ವಜನಿಕರಿಗೆ ಧೈರ್ಯ ತುಂಬಲು ಪಥಸಂಚಲನ ನಡೆಸಿದರು. ಈ ಸಂದರ್ಭ ಬಂಟ್ವಾಳ ಠಾಣೆ ಯ ಅಧಿಕಾರಿಗಳು, ಸಿಬ್ಬಂದಿಗಳುಹಾಗೂ ಕೆಎಸ್ ಆರ್ ಪಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು