News Karnataka Kannada
Thursday, May 02 2024
ಮಂಗಳೂರು

ಬಂಟ್ವಾಳ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಧಾನಿಯವರಿಗೆ ನಮಸ್ಕರಿಸಿ ಸ್ವಾಗತಿಸಿದ ತುಂಗಪ್ಪ ಬಂಗೇರ

Tungappa Bangera greets Prime Minister Narendra Modi at Mangaluru airport
Photo Credit : By Author

ಬಂಟ್ವಾಳ: ಜಗತ್ತಿನ ಹೈ ಸೆಕ್ಯುರಿಟಿಯ ನಾಯಕನಾಗಿ ಗುರುತಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರು ಸೆ. ೪ರಂದು ಮಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಂಟ್ವಾಳದ ಹಿರಿಯ ಬಿಜೆಪಿ ನಾಯಕರೊಬ್ಬರಿಗೆ ಈ ಅವಕಾಶ ಲಭಿಸಿದ್ದು, ಪಕ್ಷದ ಹಿರಿಯ ಕಟ್ಟಾಳುವಿನ ನೆಲೆಯಲ್ಲಿ ಈ ಅವಕಾಶವನ್ನು ಪಡೆದುಕೊಂಡಿದ್ದಾರೆ.

ಭದ್ರತೆಯ ದೃಷ್ಟಿಯಿಂದ ಸಾಮಾನ್ಯರಿಗೆ ಯಾರಿಗೂ ಕೂಡಾ ಪ್ರಧಾನಿ ಮೋದಿ ಅವರ ಬಳಿ ತೆರಳುವುದಕ್ಕೆ ಅವಕಾಶವಿಲ್ಲ. ನಿಗದಿತ ವ್ಯಕ್ತಿಗಳು ಮಾತ್ರ ಈ ಅವಕಾಶವನ್ನು ಪಡೆದುಕೊಂಡು ತಮ್ಮ ಅಗ್ರಗಣ್ಯ ನಾಯಕನನ್ನು ಸಮೀಪದಿಂದ ಕಂಡು ಗೌರವಿಸುತ್ತಾರೆ.

ಈ ಬಾರಿ ಬಂಟ್ವಾಳ ಬಿಜೆಪಿಯ ಹಿರಿಯ ಮುಂದಾಳು, ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಧಾನಿಗಳಿಗೆ ನಮಸ್ಕರಿಸಿ ಸ್ವಾಗತಿಸಿದ್ದು, ಅಂತಹ ಗೌರವ ಸಿಕ್ಕಿರುವುದೇ ಅವಿಸ್ಮರಣೀಯ ಕ್ಷಣ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಹಿಂದೆ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ಅವರನ್ನು ಸ್ವಾಗತಿಸುವ ಅವಕಾಶ ಸಿಕ್ಕಿತ್ತು. ಇದೀಗ ಜಗತ್ತಿನ ಶ್ರೇಷ್ಠ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಮಸ್ಕರಿಸಿ ಸ್ವಾಗತಿಸಿದ್ದೇವೆ. ಅವರು ಹತ್ತಿರ ಬರುತ್ತಿದ್ದಂತೆ ಕೈಸೆ ಹೋ ಎಂದು ಎಲ್ಲರ ಯೋಗಕ್ಷೇಮ ವಿಚಾರಿಸಿದ್ದು, ಇಂತಹ ಅವಕಾಶ ನೀಡಿರುವ ಪಕ್ಷಕ್ಕೆ ಚಿರ ಋಣಿಯಾಗಿದ್ದೇನೆ ಎಂದು ತುಂಗಪ್ಪ ಬಂಗೇರ ಅವರ ಸಂತಸ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು