ಬಂಟ್ವಾಳ : ಸರಕಾರ ತೆಗೆದುಕೊಂಡ ಕೆಲವೊಂದು ನಿರ್ಧಾರಗಳಿಂದ ಇಂದು ದೇಶದಲ್ಲಿ ನಿರುದ್ಯೋಗ ತಾಂಡವಾಡುತ್ತಿದ್ದು, ಅತೀ ದೊಡ್ಡ ಶತ್ರುವಾಗಿ ಜನರ ಜೀವ ಹಿಂಡುತ್ತಿದೆ ಎಂದು ಎ.ಐ.ಟಿ.ಯು.ಸಿ.ಪ್ರಧಾನ ಕಾರ್ಯದರ್ಶಿ ವಿಜಯ ಭಾಸ್ಕರ್ ಡಿ.ಎ.ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಖಾಲಿಯಾದ ಹುದ್ದೆಗಳನ್ನು ಭರ್ತಿ ಮಾಡುವ ಕ್ರಮ ಸರಕಾರ ಕೈಗೊಳ್ಳುತ್ತಿಲ್ಲ. 40 ಪರ್ಸೆಂಟ್ ಸರಕಾರ ಎಂದು ಹೆಸರು ವಾಸಿಯಾದ ಬಿಜೆಪಿ ಸರಕಾರ ಕೋವಿಡ್ ನ ಹೆಸರಿನಲ್ಲಿ ಜನರನ್ನು ಮೋಸ ಮಾಡುತ್ತಿದೆ. ಕಟ್ಟಡ ಇಲಾಖೆಯಲ್ಲಿ ಸಾಕಷ್ಟು ಹಣವಿದೆ ಎಂಬ ಕಾರಣಕ್ಕಾಗಿ ಬೋಗಸ್ ಮೆಂಬರ್ ಶಿಪ್ ಮಾಡಿ ಹಣ ದೋಚುವ ಕಾರ್ಯವನ್ನು ಜನಪ್ರತಿನಿಧಿಗಳ ಹಿಂಬಾಲಕರು ಮಾಡುತ್ತಿದ್ಧಾರೆ ಎಂದು ಆರೋಪ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕಾರ್ಮಿಕರ ಬವಣೆ ದಿನೇ ದಿನೇ ಹೆಚ್ಚುತ್ತಿದ್ದು, ಅಸಂಘಟಿತ ಕಾರ್ಮಿಕರಿಗೆ ರಾಜ್ಯದಲ್ಲಿ ಜೀವನ ನಡೆಸುವುದೇ ದುಸ್ತರವಾಗಿದೆ. ನಿರಂತರವಾಗಿ ಏರುತ್ತಿರುವ ಬೆಲೆ ಏರಿಕೆಯಿಂದ ಜನಸಾಮಾನ್ಯರು ಏದುಸಿರು ಬಿಡುವಂತಾಗಿದೆ ಎಂದು ಹೇಳಿದರು.
ರೈತ ಸಮುದಾಯದ ಬಿಟ್ಟರೆ ಅತೀ ಹೆಚ್ಚು ಆತ್ಮಹತ್ಯೆ ಮಾಡಿಕೊಳ್ಳುವ ವರ್ಗ ಇದ್ದರೆ ಕೆಎಸ್ಆರ್ ಟಿಸಿ ನೌಕರರು ಅವರ ಸಮಸ್ಯೆ ಗಳನ್ನು ಆಲಿಸಿ ಪರಿಸ್ಥಿತಿ ಯನ್ನು ಸುಧಾರಣೆ ಮಾಡಬೇಕು ಎಂದರು.
ಕಟ್ಟಡ ಕಾರ್ಮಿಕರ ಬಗ್ಗೆ,ಬೀಡಿ ಉದ್ಯಮ ಬಗ್ಗೆ, ಕೆ.ಎಸ್.ಆರ್.ಟಿ.ಸಿ.ನೌಕರರ ಬಗ್ಗೆ,ಯೋಜನಾ ಕಾರ್ಮಿಕರ ಸಮಸ್ಯೆಗಳನ್ನು ಸರಕಾರ ಪರಿಹಾರ ಮಾಡಬೇಕು ಎಂದು ಒತ್ತಾಯ ಮಾಡಿದ ಅವರು, ಪಿಂಚಣಿದಾರರಿಗೆ ರೂ.6000 ಪಿಂಚಣಿ ನೀಡಬೇಕು ಎಂದು ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಎಚ್.ವಿ.ರಾವ್. ಶೇಖರ್,ಸುರೇಶ್ ಕುಮಾರ್,ಪ್ರವೀಣ್ ಕುಮಾರ್,ಸೀತಾರಾಮ ಮತ್ತಿತರರು ಉಪಸ್ಥಿತರಿದ್ದರು.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…