Categories: ಮಂಗಳೂರು

ಬಂಟ್ವಾಳ: ಸರಕಾರದ ಕೆಲವೊಂದು ನಿರ್ಧಾರಗಳಿಂದ ದೇಶದಲ್ಲಿ ನಿರುದ್ಯೋಗ ತಾಂಡವಾಡುತ್ತಿದೆ

ಬಂಟ್ವಾಳ : ಸರಕಾರ ತೆಗೆದುಕೊಂಡ ಕೆಲವೊಂದು ನಿರ್ಧಾರಗಳಿಂದ ಇಂದು ದೇಶದಲ್ಲಿ ನಿರುದ್ಯೋಗ ತಾಂಡವಾಡುತ್ತಿದ್ದು, ಅತೀ ದೊಡ್ಡ ಶತ್ರುವಾಗಿ ಜನರ ಜೀವ ಹಿಂಡುತ್ತಿದೆ ಎಂದು ಎ.ಐ.ಟಿ.ಯು.ಸಿ.ಪ್ರಧಾನ ಕಾರ್ಯದರ್ಶಿ ವಿಜಯ ಭಾಸ್ಕರ್ ಡಿ.ಎ.ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಖಾಲಿಯಾದ ಹುದ್ದೆಗಳನ್ನು ಭರ್ತಿ ಮಾಡುವ ಕ್ರಮ ಸರಕಾರ ಕೈಗೊಳ್ಳುತ್ತಿಲ್ಲ. 40 ಪರ್ಸೆಂಟ್ ಸರಕಾರ ಎಂದು ಹೆಸರು ವಾಸಿಯಾದ ಬಿಜೆಪಿ ಸರಕಾರ ಕೋವಿಡ್ ನ‌ ಹೆಸರಿನಲ್ಲಿ ಜನರನ್ನು ಮೋಸ ಮಾಡುತ್ತಿದೆ. ಕಟ್ಟಡ ಇಲಾಖೆಯಲ್ಲಿ ಸಾಕಷ್ಟು ಹಣವಿದೆ ಎಂಬ ಕಾರಣಕ್ಕಾಗಿ ಬೋಗಸ್ ಮೆಂಬರ್ ಶಿಪ್ ಮಾಡಿ ಹಣ ದೋಚುವ ಕಾರ್ಯವನ್ನು ಜನಪ್ರತಿನಿಧಿಗಳ ಹಿಂಬಾಲಕರು ಮಾಡುತ್ತಿದ್ಧಾರೆ ಎಂದು ಆರೋಪ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕಾರ್ಮಿಕರ ಬವಣೆ ದಿನೇ ದಿನೇ ಹೆಚ್ಚುತ್ತಿದ್ದು, ಅಸಂಘಟಿತ ಕಾರ್ಮಿಕರಿಗೆ ರಾಜ್ಯದಲ್ಲಿ ಜೀವನ ನಡೆಸುವುದೇ ದುಸ್ತರವಾಗಿದೆ. ನಿರಂತರವಾಗಿ ಏರುತ್ತಿರುವ ಬೆಲೆ ಏರಿಕೆಯಿಂದ ಜನಸಾಮಾನ್ಯರು ಏದುಸಿರು ಬಿಡುವಂತಾಗಿದೆ ಎಂದು ಹೇಳಿದರು.

ರೈತ ಸಮುದಾಯದ ಬಿಟ್ಟರೆ ಅತೀ ಹೆಚ್ಚು ಆತ್ಮಹತ್ಯೆ ಮಾಡಿಕೊಳ್ಳುವ ವರ್ಗ ಇದ್ದರೆ ಕೆಎಸ್ಆರ್ ಟಿಸಿ ನೌಕರರು ಅವರ ಸಮಸ್ಯೆ ಗಳನ್ನು ಆಲಿಸಿ ಪರಿಸ್ಥಿತಿ ಯನ್ನು ಸುಧಾರಣೆ ಮಾಡಬೇಕು ಎಂದರು.

ಕಟ್ಟಡ ಕಾರ್ಮಿಕರ ಬಗ್ಗೆ,ಬೀಡಿ ಉದ್ಯಮ ಬಗ್ಗೆ, ಕೆ.ಎಸ್.ಆರ್.ಟಿ.ಸಿ.ನೌಕರರ ಬಗ್ಗೆ,ಯೋಜನಾ ಕಾರ್ಮಿಕರ ಸಮಸ್ಯೆಗಳನ್ನು ಸರಕಾರ ಪರಿಹಾರ ಮಾಡಬೇಕು ಎಂದು ಒತ್ತಾಯ ಮಾಡಿದ ಅವರು, ಪಿಂಚಣಿದಾರರಿಗೆ ರೂ.6000 ಪಿಂಚಣಿ ನೀಡಬೇಕು ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಎಚ್.ವಿ.ರಾವ್. ಶೇಖರ್,ಸುರೇಶ್ ಕುಮಾರ್,ಪ್ರವೀಣ್ ಕುಮಾರ್,ಸೀತಾರಾಮ ಮತ್ತಿತರರು ಉಪಸ್ಥಿತರಿದ್ದರು.

Ashika S

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

4 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

4 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

4 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

5 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

5 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

5 hours ago