ಮಂಗಳೂರು

ಬಂಟ್ವಾಳ: ವಿವಿಧತೆಯಲ್ಲಿ ಏಕತೆಯೇ ಈ‌ ಮಣ್ಣಿನ‌ ಮೂಲ ಗುಣ- ಶ್ರೀ ಮೋಹನದಾಸ ಸ್ವಾಮೀಜಿ

ಬಂಟ್ವಾಳ: ವಿವಿಧತೆಯಲ್ಲಿ ಏಕತೆಯೇ ಈ‌ ಮಣ್ಣಿನ‌ ಮೂಲ ಗುಣ. ಆದರೆ ಅಧಿಕಾರ, ದುಡ್ಡು, ಲಾಲಸೆಯಲ್ಲಿ ನಾವು ಮುಳುಗಿ ಎಲ್ಲವನ್ನೂ ಮರೆಯುತ್ತಿದ್ದೇವೆ, ಸಾವಿನ ಹಂತದಲ್ಲೂ ಜೀಸಸ್ ಜಗತ್ತಿಗೆ ನೀಡಿದ‌ ಸಂದೇಶವನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿ ಹೇಳಿದರು.

ಕ್ರಿಸ್ಮಸ್ ಸೌಹಾರ್ದ ಸಂಭ್ರಮ ಸಮಿತಿ ಬಂಟ್ವಾಳ ಇವರ ಆಶ್ರಯದಲ್ಲಿ ಬಂಟ್ವಾಳ ಮತ್ತು ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಇದರ ಸಹಕಾರದೊಂದಿಗೆ ಮೊಡಂಕಾಪು ಚರ್ಚ್ ಮೈದಾನದಲ್ಲಿ ಮಂಗಳವಾರ ಸಂಜೆ ಆಯೋಜಿಸಲಾದ ಕ್ರಿಸ್ಮಸ್ ಸೌಹಾರ್ದ ಸಂಭ್ರಮ 2022 ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.

ಶಿಲುಬೆಗೇರಿಸುವಂತಹಾ ಸಂಕಟ ಸಂಕಷ್ಟದ ಕ್ಷಣಗಳು ಆಗಾಗ್ಗೆ ಬರುತ್ತಿದೆ, ನಾವೆಲ್ಲರೂ ಜೀಸಸ್ ಕ್ರೈಸ್ತರು ಹೇಳಿದ ಆದರ್ಶದ ಹಾದಿಯಲ್ಲಿ ನಾವೆಲ್ಲರೂ ನಡೆಯಬೇಕು.ಧರ್ಮದ ಬೇಲಿಯನ್ನು ಹಾಕಿಕೊಳ್ಳದೆ, ಭಗವಂತನ ಗುಣಗಳನ್ನು ಮೈಗೂಡಿಸಿಕೊಂಡು ಮತ್ಸರದ, ಮತೀಯವಾದದ ಸಂಘರ್ಷಗಳನ್ನು ದೂರ ಮಾಡಿಕೊಳ್ಳಬೇಕಿದೆ ಎಂದವರು ಕರೆ ನೀಡಿದರು.

ಬಂಟ್ವಾಳ ವಲಯ ಪ್ರಧಾನ ಧರ್ಮಗುರು ವಂ| ವಲೇರಿಯನ್‌ ಡಿ’ಸೋಜ ಕಾರ್ಯಕ್ರಮವನ್ನು ಉದ್ಘಾಟಿಸಿಮಾತನಾಡಿ, ಕಷ್ಟದಲ್ಲಿರುವ ಪ್ರತಿಯೊಬ್ಬರಿಗೂ ಸೇವೆ ಮಾಡಿದರೆ ಭಗವಂತನ ದರ್ಶನವಾಗುತ್ತದೆ ಎಂದರು.

ಕಿನ್ನಿಗೋಳಿ ಇಮ್ಯಾಕುಲೇಟ್ ಕನ್ಸೆಪ್ಶನ್ ಚರ್ಚ್ ನ ಧರ್ಮಗುರು ವಂ। ಪಾವುಸ್ತಿನ್ ಲೋಬೊ ಮಾತನಾಡಿ, ವಿವಿಧತೆಯಲ್ಲಿ ಏಕತೆ ಅದು, ಜಗತ್ತಿನ ನಿಯಮ, ಅದನ್ನು ನಮ್ಮ ಬಾಳಿನಲ್ಲೂ ಅನುಷ್ಠಾನಗೊಳಿಸುವ ಮಾನವೀಯತೆ ನಮಗಿರಬೇಕು ಎಂದರು. ಮಂಗಳೂರು ಶಾಂತಿ ಪ್ರಕಾಶನದ ವ್ಯವಸ್ಥಾಪಕಜ| ಮೊಹಮ್ಮದ್ ಕುಂಞ ಸೌಹಾರ್ದ ಸಂದೇಶ ನೀಡಿದರು. ಧರ್ಮದ ಹೆಸರಿನಲ್ಲಿ ಕೋಮು ವಿಷಬೀಜಗಳನ್ನು ಬಿತ್ತುತ್ತಿರುವ ಈ ಸನ್ನಿವೇಶದಲ್ಲಿ ಮನಸ್ಸುಗಳನ್ನು ಒಂದಾಗಿಸುವ ಕೂಟ ಹಮ್ಮಿಕೊಂಡಿರುವುದು ಪ್ರಶಂಸನೀಯ. ದಾರ್ಶನಿಕರು ಹಾಕಿ‌ಕೊಟ್ಟ ಆದರ್ಶದ ಹಾದಿಯಲ್ಲಿ‌ ನಡೆದರೆ ಮಾತ್ರ ಸಂಘರ್ಷ ರಹಿತ ಮಾದರಿ‌ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಅವರು ಏಸುಕ್ರಿಸ್ತರು ನೀಡಿದ ಸಂದೇಶ ವರ್ತಮಾನ ಕಾಲದಲ್ಲಿ ಹೆಚ್ಚು ಅರ್ಥಪೂರ್ಣವಾಗಿ ಅನುಷ್ಠಾನವಾಗಬೇಕಿದೆ, ಅಸಹಿಷ್ಣುತೆ ನಮ್ಮೆಲ್ಲರ ನೆಮ್ಮದಿ ಕೆಡಿಸುತ್ತಿದೆ, ಜನಾಂಗೀಯ ಘರ್ಷಣೆ ನಡೆದ ದೇಶಗಳು ನಾಶವಾಗಿದೆ, ಹೀಗಾಗಿ ನಾವೆಲ್ಲರೂ ಪರಸ್ಪರ ಪ್ರೀತಿಸುವ ಮೂಲಕ ಒಂದು ಮಾನವೀಯ ಸಮಾಜವನ್ನು ಕಟ್ಟುವ ಸಂಕಲ್ಪ ಮಾಡಬೇಕು, ಇದಕ್ಕೆ ಇಂದಿನ ಕಾರ್ಯಕ್ರಮ ಹೆಚ್ಚು ಪೂರಕವಾಗಿದೆ. ದ್ವೇಷ ಮಾಡುವ ಮನಸ್ಸು ಕೊಡದೆ, ಪರಸ್ಪರ ಪ್ರೀತಿಸುವ ಮನಸ್ಸನ್ನು ದೇವರು ಎಲ್ಲರಿಗೂ ದಯಪಾಲಿಸಬೇಕು. ದ್ವೇಷಕ್ಕೆ ಪ್ರೀತಿ ಉತ್ತರವಾಗಲಿ, ಹಿಂಸೆಗೆ ಅಹಿಂಸೆ ಉತ್ತರವಾಗಬೇಕಿದೆ ಎಂದವರು ಆಶಯ ವ್ಯಕ್ತಪಡಿಸಿದರು.

ಬಂಟ್ವಾಳ ಬ್ಲಾಕ್ ಮಹಿಳಾ‌ಕಾಂಗ್ರೇಸ್ ಅಧ್ಯಕ್ಷೆ ಲವೀನಾ ವಿಲ್ಮಾ ಮೊರಾಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕ್ರಿಸ್ಮಸ್ ಸೌಹಾರ್ದ ಸಂಭ್ರಮ ಸಮಿತಿ ಬಂಟ್ವಾಳ ಇದರ ಸಂಚಾಲಕ ಪಿಯೂಸ್ ಎಲ್ ರೊಡ್ರಿಗಸ್ ಸ್ವಾಗತಿಸಿ, ಪ್ರಸ್ತಾವನೆಗೈದರು. ಸಮಾಜದಲ್ಲಿ ಶಾಂತಿನೆಲೆಯಾಗಲು ಸೌಹಾರ್ದತೆ ಅತೀ ಅಗತ್ಯವಾಗಿದ್ದು, ಕ್ರಿಸ್ಮಸ್ ನೀಡುವ ಸಂದೇಶದ ಮೂಲಕ ಸಮಾಜವನ್ನು ಜಾಗೃತ ಗೊಳಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದವರು ಹೇಳಿದರು.

ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕಾರ್ಯಕ್ರಮ ನಿರೂಪಿಸಿ, ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೇಸ್ ಅಧ್ಯಕ್ಷೆ ಜಯಂತಿ ಪೂಜಾರಿ ವಂದಿಸಿದರು.

ಕ್ರಿಸ್ಮಸ್ ಸೌಹಾರ್ದ ಸಂಭ್ರಮ ಸಭಾ ಕಾರ್ಯಕ್ರಮಕ್ಕೂ ಮುನ್ನ ಬಿಸಿರೋಡಿನ ಸರ್ಕಲ್ ಬಳಿಯಿಂದ ಸೌಹಾರ್ದ ಬೈಕ್ ರ್ಯಾಲಿ ಹಾಗೂ ಕ್ರಿಸ್ಮಸ್ ಸ್ತಬ್ಧ ಚಿತ್ರಗಳನ್ನೊಳಗೊಂಡ ವಾಹನ ಜಾಥವನ್ನು ಮಾಜಿ ಸಚಿವ ಬಿ.ರಮಾನಾಥ ರೈ ಪಾರಿವಾಳಗಳನ್ನು ಹಾರಿ ಬಿಡುವ ಮೂಲಕ ಚಾಲನೆ ನೀಡಿದರು. ಕ್ರಿಸ್ಮಸ್ ಸೌಹಾರ್ದ ಸಂಭ್ರಮ ಸಮಿತಿ ಬಂಟ್ವಾಳ ಇದರ ಸಂಚಾಲಕ ಪಿಯೂಸ್ ಎಲ್ ರೊಡ್ರಿಗಸ್, ಪ್ರಮುಖರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಎಂ.ಎಸ್.ಮಹಮ್ಮದ್, ಅಬ್ಬಾಸ್ ಅಲಿ, ಮೊದಲಾದವರು ಉಪಸ್ಥಿತರಿದ್ದರು.

Gayathri SG

Recent Posts

ಮರಾಠಿ ಭಾಷೆಯಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನ ಅನಾವರಣ

ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…

1 min ago

ಪುಟಾಣಿ ಕಲಾವಿದೆಯ ಕಲಾಸಿರಿಯ ಅನಾವರಣ: ಬಾಲಕಿಯ ಅದ್ಭುತ ಪ್ರದರ್ಶನಕ್ಕೆ ವ್ಯಾಪಕ ಮೆಚ್ಚುಗೆ

ಪುಟಾಣಿ ಕಲಾವಿದೆ ಹತ್ತು ವರ್ಷದ ಕುಮಾರಿ ಗಂಗಾ ಶಶಿಧರ್ ಬಳಗದ ವಯೋಲಿನ್ ವಾದನ ಕಛೇರಿ ಕಾರ್ಯಕ್ರಮ ಉಡುಪಿಯ ಶ್ರೀ ಕೃಷ್ಣಮಠದ…

4 mins ago

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಘೋಷಣೆ: ಸಿಎಂಗೆ ಕೆಯುಡಬ್ಲ್ಯುಜೆ ವತಿಯಿಂದ ಅಭಿನಂದನೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಹುದಿನದ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರರಿಗೆ ಬಸ್ ಪಾಸ್ ನೀಡುವ ಸಂಬಂಧ ಇತ್ತಿಚೆಗೆ ದಾವಣಗೆರೆಯಲ್ಲಿ ನಡೆದ…

16 mins ago

ರಾಹುಲ್ ಗಾಂಧಿಗೆ 1000 ರೂ. ದಂಡ ವಿಧಿಸಿದ ಜಾರ್ಖಂಡ್ ಹೈಕೋರ್ಟ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ…

18 mins ago

ಮಂಗಳೂರು: ಪಿ.ಎ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಆಚರಣೆ

“ಅಧ್ಯಾಪಕರುಗಳ ಪ್ರೋತ್ಸಾಹ ಮತ್ತು ಬೆಂಬಲವೇ ಇವತ್ತಿನ ಈ ದಿನದ ಯಶಸ್ಸು ಮತ್ತು ಇಲ್ಲಿಯ ಕಾರ್ಯಕ್ರಮಗಳೇ ಈ ಕಾಲೇಜಿನ ಮಹತ್ವವನ್ನು ಸಾರುತ್ತಿದೆ…

23 mins ago

40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ: ಡಿ.ಕೆ.ಶಿವಕುಮಾರ್

ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ…

32 mins ago