News Karnataka Kannada
Thursday, May 02 2024
ಮಂಗಳೂರು

ಬಂಟ್ವಾಳ: ವಿಟ್ಲ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ

Bantwal: Vitla Brahmasree Multipurpose Co-operative Society General Body Meeting
Photo Credit : By Author

ಬಂಟ್ವಾಳ: ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘ ನಿ.ವಿಟ್ಲ ಇದರ ವಾರ್ಷಿಕ ಮಹಾಸಭೆ ಶುಕ್ರವಾರ ಪೊನ್ನೊಟ್ಟು ಶಿವಗಿರಿ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ನಿಡ್ಯ ಅಧ್ಯಕ್ಷತೆ ವಹಿಸಿದ್ದರು. ಸಂಘವು ಪ್ರಸಕ್ತ ಆರ್ಥಿಕ ವರ್ಷದಲ್ಲಿ 52,37,57,382ಕೋ. ವ್ಯವಹಾರ ನಡೆಸಿ, 37,62,455 ರೂ.ನಿವ್ವಳ ಲಾಭಗಳಿಸಿದೆ. ಸಂಘದ ಸದಸ್ಯರಿಗೆ ಸಂಘದ ಲಾಭಾಂಶದ ಶೇ.10 ಡಿವಿಡೆಂಡ್ ವಿತರಿಸಲಿದೆ ಎಂದು ಘೋಷಿಸಿದರು. ಹೊಸ ಶಾಖೆ ತೆರೆಯುವ ಬಗ್ಗೆ, ಸಂಘಕ್ಕೆ ಸ್ವಂತ ಕಟ್ಟಡ ನಿರ್ಮಾಣ ಮಾಡುವ ಬಗ್ಗೆ ತಿಳಿಸಲಾಯಿತು.

ಇದೇ ಸಂದರ್ಭದಲ್ಲಿ ಸಹಕಾರಿ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಾದ ಹೆಚ್. ಜಗನ್ನಾಥ ಸಾಲ್ಯಾನ್, ಚೆನ್ನಪ್ಪ ಪೂಜಾರಿ, ನರಸಪ್ಪ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಸಮಾಜದ ವಿದ್ಯಾರ್ಥಿ ಸಾಧಕರನ್ನು ಪುರಸ್ಕರಿಸಲಾಯಿತು.

ಸಂಘದ ಉಪಾಧ್ಯಕ್ಷ ಬಾಬು ಕೆ.ವಿ, ನಿರ್ದೇಶಕರಾದ ಡಾ.ಗೀತ ಪ್ರಕಾಶ್, ರಮೇಶ್ ಕುಮಾರ್, ಜಗದೀಶ ಪಾಣೆಮಜಲು, ರಾಘವ ಪೂಜಾರಿ, ಸಂಜೀವ ಪೂಜಾರಿ ಎಂ., ಅಭಿಜಿತ್ ಜೆ, ರವಿ ಬಿ.ಕೆ, ಮಾಧವ ಪಟ್ಲ., ಶ್ರೀಧರ್ ಬಾಳೆಕಲ್ಲು, ವನಿತಾ ಚಂದ್ರಹಾಸ, ಪುಷ್ಪಾ.ಎಸ್ ಉಪಸ್ಥಿತರಿದ್ದರು.

ನಿರ್ದೇಶಕ ಶ್ರೀಧರ ಬಾಳೆಕಲ್ಲು ಸ್ವಾಗತಿಸಿದರು. ಉಪಾಧ್ಯಕ್ಷ ಬಾಬು ಕೆ.ವಿ ವಂದಿಸಿದರು. ಕಾರ್ಯನಿರ್ವಾಹಣಾಧಿಕಾರಿ ಜಯಂತ್ ಪಿ.ಆಯವ್ಯಯ ವರದಿ ಮಂಡಿಸಿದರು. ಸಿಬ್ಬಂದಿಗಳಾದ ನಿಶ್ಮಿತಾ ಎಸ್.ಡಿ, ಸಚಿತ್ ಕುಮಾರ್ ಲಾಭನಷ್ಟದ ತಖ್ತೆಯನ್ನು ವಾಚಿಸಿದರು. ಸಿಬ್ಬಂದಿ ಜಗನ್ನಾಥ ಪುಣಚ ಕಾರ್ಯಕ್ರಮ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು