Categories: ಮಂಗಳೂರು

ಬಂಟ್ವಾಳ: ಯುವ ಸಂಗಮ ಮೆಲ್ಕಾರ್ ವತಿಯಿಂದ ಪ್ರಧಾನಿ ಮೋದಿಯವರ ಚಿತ್ರ ಬಿಡಿಸುವ ಸ್ಪರ್ಧೆ

ಬಂಟ್ವಾಳ: ಯುವ ಸಂಗಮ ಮೆಲ್ಕಾರ್ ವತಿಯಿಂದ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿದ್ದ ಮೋದಿಯವರ ಚಿತ್ರ ಬಿಡಿಸುವ ಸ್ಪರ್ಧೆಯ ವಿಜೇತರನ್ನು ಮೆಲ್ಕಾರಿನ ಬಿರ್ವ ಸೆಂಟರ್ ಸಭಾಂಗಣದಲ್ಲಿ ಆಯ್ಕೆ ಮಾಡಲಾಯಿತು.

ಚಿತ್ರ ಕಲಾವಿದರಾದ ವೈ.ಎನ್.ತಾರಾನಾಥ ಆಚಾರ್ಯ, ದೇರೆಬೈಲು ಕೊಂಚಾಡಿ ರಮ್ಯಾ ಸ್ಕೂಲ್ ಆಫ್ ಆರ್ಟ್ನ ಕಲಾವಿದೆ ರಮ್ಯಾಲಕ್ಷ್ಮೀಶ, ಮಚ್ಚೇಂದ್ರನಾಥ್ ಕಲ್ಲಡ್ಕ, ಮನೋಜ್ ಕನಪಾಡಿ ಅವರು ತೀರ್ಪುಗಾರರಾಗಿ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಯುವ ಸಂಗಮದ ಅಧ್ಯಕ್ಷ ಶಿವಾನಂದ ಗುಡ್ಡೆಅಂಗಡಿ, ಗೌರವಾಧ್ಯಕ್ಷ ಎಂ.ಎನ್.ಕುಮಾರ್, ನಿವೃತ್ತ ಬ್ಯಾಂಕ್ ಅಧಿಕಾರಿ ಮಹೇಶ್, ಪುರಸಭಾ ಮಾಜಿ ಸದಸ್ಯ ದಾಮೋದರ ಮೆಲ್ಕಾರ್, ಯುವ ಸಂಗಮದ ಸದಸ್ಯರಾದ ಓಂಪ್ರಕಾಶ್, ವಿಠಲ್ ಶೆಣೈ, ಅಶೋಕ್ ಆಚಾರ್ಯ, ಪ್ರವೀಣ್, ಪ್ರಸಾದ್, ಅಶ್ವಥ್, ಶರ್ಮಿಳಾ ಅಶೋಕ್, ಜ್ಞಾನೇಶ್ವರ ಪ್ರಭು, ಶ್ರೀನಿವಾಸ ಪೂಜಾರಿ ಮೆಲ್ಕಾರ್, ಗುರುಪ್ರಸಾದ್ ಶೆಣೈ, ಶುಭಂ ನಾಯಕ್, ನಿಶಾಂತ್ ಮೆಲ್ಕಾರ್ ಮೊದಲಾದವರಿದ್ದರು.

ಯುವ ಸಂಗಮದ ಮಾಜಿ ಅಧ್ಯಕ್ಷ ಕಿಶೋರ್‌ಕುಮಾರ್ ಸ್ವಾಗತಿಸಿದರು. ಕಾರ್ಯದರ್ಶಿ ಹರೀಶ್ ಶೆಣೈ ವಂದಿಸಿದರು. ಶಂಕರ್ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು. ಸುಮಾರು ೨೦೦ಕ್ಕೂ ಅಧಿಕ ಚಿತ್ರಗಳು ಸ್ಪರ್ಧೆಗೆ ಬಂದಿದ್ದವು.

Gayathri SG

Recent Posts

ಆರ್‌ಸಿಬಿ vs ಸಿಎಸ್ಕೆ: ಚಾಲೆಂಜ್ ಹಾಕಿ ಖಾಕಿ ಅತಿಥಿಯಾದ ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್

ಶನಿವಾರ ನಡೆದ ಹೈವೋಲ್ಟೇಜ್ ಆರ್‌ಸಿಬಿ ವರ್ಸಸ್ ಸಿಎಸ್‌ಕೆ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಅತಿಕ್ರಮ ಪ್ರವೇಶ ಮಾಡುವುದಾಗಿ ವಿಡಿಯೋ ಪೋಸ್ಟ್…

13 mins ago

ಶೂ ವ್ಯಾಪಾರಿ ಮನೆಯಿಂದ 40 ಕೋಟಿ ರೂ. ನಗದು ವಶಕ್ಕೆ

ತೆರಿಗೆ ವಂಚನೆ ಮತ್ತು ಅಕ್ರಮ ಆಸ್ತಿ ಹೊಂದಿದ್ದ ಆರೋಪದ ಮೇಲೆ ಐಟಿ ಅಧಿಕಾರಿಗಳು ಆಗ್ರಾದಲ್ಲಿ ಶೂ ವ್ಯಾಪಾರಿ ರಾಮನಾಥ್‌ ಡಂಗ್‌…

17 mins ago

ಐಪಿಎಲ್‌ ಬೆಟ್ಟಿಂಗ್‌: ಲಕ್ಷ ಲಕ್ಷ ಹಣ ಕಳೆದುಕೊಂಡು ನೇಣಿಗೆ ಶರಣು

ಐಪಿಎಲ್‌ ಬೆಟ್ಟಿಂಗ್‌ನಲ್ಲಿ ಲಕ್ಷ ಲಕ್ಷ ಹಣ ಕಳೆದುಕೊಂಡ ಯುವಕನೊಬ್ಬ ಲಾಡ್ಜ್‌ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನ…

41 mins ago

ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್‌ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್‌ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89)…

53 mins ago

ಸ್ಥಳೀಯ ವಾಹನಗಳಿಗೆ ಟೋಲ್ ಕಡಿತ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…

1 hour ago

ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ : ತುರ್ತು ಭೂ ಸ್ಪರ್ಶ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು…

1 hour ago