ಮಂಗಳೂರು

ಬಂಟ್ವಾಳ: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

ಬಂಟ್ವಾಳ: ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ವಿಟ್ಲ ಕಸಬ ಗ್ರಾಮದ ಕೈಂತಿಲ ಎಂಬಲ್ಲಿ ನಡೆದ ಬಗ್ಗೆ‌ ವರದಿಯಾಗಿದೆ.

ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮದ ಕೈಂತಿಲ ನಿವಾಸಿ ಗಿರಿಯಪ್ಪ ಗೌಡ ರವರ ಪತ್ನಿ ಸವಿತ ಯಾನೆ ಸೇಸಮ್ಮ (೫೦ ವ.) ರವರು ಮೃತ ದುರ್ದೈವಿ.

ಸೇಸಮ್ಮ ರವರು ಕೂಲಿ ಕೆಲಸ ಮಾಡಿಕೊಂಡಿದ್ದು, ಮನೆ ಸಮೀಪದ ತೋಟದಲ್ಲಿ ವಿಷ ಸೇವಿಸಿದ ಸ್ಥಿತಿಯಲ್ಲಿ ಕಂಡುಬಂದಿದ್ದರು. ಕೂಡಲೇ ಅವರನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತಾದರೂ ಆ ವೇಳೆಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಡಪಡಿಸಿರುವುದಾಗಿ ಅವರ ಸಂಬಂದಿಕರು ತಿಳಿಸಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಮೃತರ ಸಹೋದರ ಕೇಪು ಗ್ರಾಮದ ವಳಕಟ್ಟೆ ನಿವಾಸಿ ಚಂದ್ರಶೇಖರ ರವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು

Ashika S

Recent Posts

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

20 mins ago

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

29 mins ago

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…

35 mins ago

ಹೊಸ ರುಚಿ: ಅವಲಕ್ಕಿ ಹುಳಿ ಮಾಡುವುದು ಹೇಗೆ?

ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ  ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…

42 mins ago

ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಯುವಕನಿಗೆ ಮೆಚ್ಚುಗೆಯ ಸುರಿಮಳೆ

ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…

51 mins ago

ಶ್ರೀರಾಮ ಸೇನೆ ರಾಜ್ಯಾಧ್ಯಕ್ಷರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲು

ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…

56 mins ago