News Karnataka Kannada
Sunday, April 28 2024
ಮಂಗಳೂರು

ಬಂಟ್ವಾಳ : ದಂಡ ಹಾಕಿದಕ್ಕೆ ಎಸ್.ಐ., ರಿಕ್ಷಾಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನ

Bantwal
Photo Credit : News Kannada

ಬಂಟ್ವಾಳ: ಕಾನೂನು ಬಾಹಿರವಾಗಿ ಆಟೋರಿಕ್ಷಾ ಓಡಿಸುತ್ತಿದ್ದ ವ್ಯಕ್ತಿಯೋರ್ವನನ್ನು ಟ್ರಾಫಿಕ್ ಪೋಲೀಸರು ತಡೆದು ದಂಡ ಹಾಕಿದರು ಎಂಬ ಕಾರಣಕ್ಕೆ ಆವೇಶಕ್ಕೊಳಗಾದ ಚಾಲಕ ಟ್ರಾಫಿಕ್ ಎಸ್.ಐ.ಹಾಗೂ ಸರಕಾರಿ ‌ವಾಹನಕ್ಕೆ ಮತ್ತು ಅಟೋ ರಿಕ್ಷಾಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾದ ಘಟನೆ ದಕ್ಷಿಣ ಕನ್ನಡದ ಬಂಟ್ವಾಳ ಬಿಸಿರೋಡಿನ ‌ಕೈಕಂಬ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಸಾರ್ವಜನಿಕವಾಗಿ ಪೆಟ್ರೋಲ್ ಸುರಿದು ಬೆಂಕಿ ಹಾಕಿ ಅನಾಹುತಕ್ಕೆ ಕಾರಣನಾದ ಆಟೋ ಚಾಲಕನ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಗೂಡಿನಬಳಿ ನಿವಾಸಿ ಮಹಮ್ಮದ್ ಅನ್ಸಾರ್ ಪ್ರಕರಣದ ಆರೋಪಿಯಾಗಿದ್ದು ,ಸದ್ಯ ತಲೆಮರೆಸಿಕೊಂಡಿದ್ದಾನೆ.

ಟ್ರಾಫಿಕ್ ಎಸ್‌ಐ.ಸುತೇಶ್ ಅವರು ಕೈಕಂಬದಲ್ಲಿ ವಾಹನಗಳ ತಪಾಸಣಾ ಕಾರ್ಯದಲ್ಲಿ ತೊಡಗಿದ್ದ ವೇಳೆ, ಯೂನಿಫಾರ್ಮ್ ಹಾಕದೆ ಮೊಬೈಲ್ ನಲ್ಲಿ ಮಾತನಾಡಿಕೊಂಡು ರಿಕ್ಷಾ ಓಡಿಸುತ್ತಿದ್ದ ಚಾಲಕನನ್ನು ನಿಲ್ಲಿಸಿ , ಆತನ ಮೇಲೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ಕಾರಣಕ್ಕಾಗಿ 2 ಸಾವಿರ ದಂಡ ಹಾಕಿ ನೋಟೀಸ್ ನೀಡಿದರು.

ಇದೇ ಕಾರಣದಿಂದ ಸಾರ್ವಜನಿಕವಾಗಿ ಬೀದಿ ರಂಪಾಟ ಮಾಡಿ, ಪೋಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಅನ್ಸಾರ್ ಬಳಿಕ ರಿಕ್ಷಾವನ್ನು ಪೋಲೀಸರ ಎದುರಿನಲ್ಲಿಯೇ ಸುಟ್ಟುಹಾಕುವುದಾಗಿ ಬೆದರಿಸಿದ.ಬಳಿಕ ಎಸ್ ಐ ಹಾಗೂ ಜೀಪ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ನೀಡಲು ಮುಂದಾದ. ಎಸ್.ಐ.ಅವರು ಆತನ ಮೇಲೆ ದೂರು ನೀಡಿದ್ದಾರೆ. ಇದೀಗ ಈತನ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು