News Karnataka Kannada
Monday, April 29 2024
ಮಂಗಳೂರು

ಬೆಳ್ಳಾರೆ: ಪ್ರವೀಣ್‌ ಹತ್ಯೆ ಪ್ರಕರಣ ಸಂಬಂಧಿಸಿ ಇವರೆಗೂ 10 ಮಂದಿ ಶಂಕಿತರನ್ನ ವಶಕ್ಕೆ ಪಡೆದ ಪೊಲೀಸರು

Puttur: BJP youth leader Praveen Nettaru hacked to death
Photo Credit : News Kannada

ದಕ್ಷಿಣ ಕನ್ನಡ: ಜಿಲ್ಲೆಯ ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ಹತ್ಯೆ ಪ್ರಕರಣ ಸಂಬಂಧಿಸಿ ಇವರೆಗೂ 10 ಮಂದಿ ಶಂಕಿತರನ್ನ ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.

ಸಿಎಂ ಜೊತೆಗಿನ ಸಭೆಯ ನಂತ್ರ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವರುಪ್ರಕರಣದ ಕುರಿತು ಸಿಎಂ ಜೊತೆ ಮಾತನಾಡಿದ್ದೇವೆ.ಪ್ರವೀಣ್‌ ಸೂದ್‌ ಬೆಳವಣಿಗೆ ಬಗ್ಗೆ ಮಾಹಿತಿ ನೀಡಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡಲು ಮನವಿ ಮಾಡಿದ್ದೇವೆ.

ಪ್ರವೀಣ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ 10 ಮಂದಿ ವಶಕ್ಕೆ ಪಡೆಯಲಾಗಿದೆ. ಪೊಲೀಸರು ತುಂಬಾನೇ ಚುರುಕಾಗಿ ತನಿಖೆ ನಡೆಸುತ್ತಿದ್ದಾರೆ. ಇನ್ನು ನಮ್ಮ ಪೊಲೀಸರು ಕೇರಳಕ್ಕೆ ತೆರಳಿ ಹುಡುಕಾಟ ನಡೆಸುತ್ತಿದ್ದಾರೆ. ಅಗತ್ಯವಿದ್ರೆ, ಪ್ರಕರಣವನ್ನ ಎನ್‌ಐಎಗೆ ಒಪ್ಪಿಸಲು ಸಿದ್ದರಿದ್ದೇವೆ’ ಎಂದರು. ವೀಣ್‌ ಹತ್ಯೆ ನಂತ್ರ ಬೆಳ್ಳಾರೆ ಉದ್ವಿಗ್ನಗೊಂಡಿದ್ದು, 144 ಸೆಕ್ಷನ್‌ ಜಾರಿ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು