ಬೆಳ್ತಂಗಡಿ: ಮೂಡಬಿದಿರೆಯಲ್ಲಿ ಡಿ. 21 ರಿಂದ ನಡೆಯುವ ಅಂತಾರಾಷ್ಟ್ರೀಯ ಜಾಂಬೂರಿ ಉತ್ಸವಕ್ಕೆ ಬೆಳ್ತಂಗಡಿ ತಾಲೂಕಿನಿಂದ 100 ಕ್ವಿಂಟಾಲ್ ಅಕ್ಕಿ,1 ಲಕ್ಷ ತೆಂಗಿನಕಾಯಿಯ ಹೊರೆಕಾಣಿಕೆ ನೀಡಲಾಗುತ್ತಿದೆ ಎಂದು ಶಾಸಕ ಹರೀಶ್ ಪೂಂಜಾ ಹೇಳಿದರು.
ಅವರು ಸೋಮವಾರ ಎ. ಪಿ. ಎಂ. ಸಿ. ಆವರಣದಲ್ಲಿ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿ ಸುಮಾರು ಇಪ್ಪತ್ತಕ್ಕೂ ಅಧಿಕ ವಾಹನಗಳಲ್ಲಿ ಹೊರೆಕಾಣಿಕೆ ಹೋಗಲಿದ್ದು ತಾಲೂಕಿನ ಅನೇಕ ಕುಟುಂಬಗಳು ಸಹಕಾರ ನೀಡಿದ್ದಾರೆ.
ಇವರಿಗೆ ಅಭಿನಂದನೆಯನ್ನು ಸಲ್ಲಿಸುತ್ತೆನೆ. ಜೊತೆಗೆ ಅಹಾರ ಇಲಾಖೆ, ಗ್ರಾಮ ಪಂಚಾಯತಿಗಳು, ಶಿಕ್ಷಣ ಸಂಸ್ಥೆಗಳು ಸಹಕಾರ ನೀಡಿದ್ದು ಇದರಿಂದ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಹೊರೆಕಾಣಿಕೆ ಸಂಗ್ರಹವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ತಾ. ಪಂ. ಮಾಜಿ ಸದಸ್ಯ ಜೋಯಲ್ ಮೆಂಡೋನ್ಸಾ,ವಿಶ್ವಹಿಂದು ಪರಿಷತ್ ನ ಮುಖಂಡರುಗಳಾದ ಸುಬ್ರಹ್ಮಣ್ಯ ಕುಮಾರ್ ಅಗರ್ಥ, ನವೀನ್ ನೆರಿಯ,ತಾ. ಪಂ. ಮುಖ್ಯ ಕಾರ್ಯನಿರ್ವಹಣಾದಧಿಕಾರಿ ಕುಸುಮಾದರ್, ಮ್ಯಾನೇಜರ್ ಪ್ರಶಾಂತ್ ಡಿ,ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ, ವಾಣಿ ಕಾಲೇಜಿನ ಪ್ರಾಚಾರ್ಯ ಯದುಪತಿ ಗೌಡ,ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ, ವಿವಿಧ ಶಾಲಾ ಮುಖ್ಯೋಪಾಧ್ಯಾಯರುಗಳು,ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು. ಶಿಕ್ಷಕ ಧರಣೇಂದ್ರ ಜೈನ್ ಕಾರ್ಯಕ್ರಮ ನಿರೂಪಿಸಿದರು.