News Karnataka Kannada
Saturday, May 04 2024
ಮಂಗಳೂರು

ಬೆಳ್ತಂಗಡಿ: ರಸ್ತೆ ದಾಟುತಿದ್ದ ವ್ಯಕ್ತಿಗೆ ಕಾರು ಡಿಕ್ಕಿ

Uttar Pradesh: Three killed as truck rams into dhaba
Photo Credit : Wikimedia

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ವ್ಯಕ್ತಿಯೊಬ್ಬರು ರಸ್ತೆ ದಾಟುತ್ತಿದ್ದ ವೇಳೆಗೆ ಅವರಿಗೆ ಕಾರೊಂದು ಡಿಕ್ಕಿಹೊಡೆದು ಗಂಭೀರ ಗಾಯವಾದ ಘಟನೆ ಮಂಗಳವಾರ ನಡೆದಿದೆ.

ಬೆಳ್ತಂಗಡಿ ಸಂಜಯನಗರ ನಿವಾಸಿ, ನಿವೃತ್ತ ಸರಕಾರಿ ಉದ್ಯೋಗಿ ಪಿ.ಕೆ ಅಬ್ದುಲ್ ರಹಿಮಾನ್ (70ವ) ಅವರೇ ಅಪಘಾತಕ್ಕೊಳಗಾದವರು

ಚಿಕ್ಕಮಗಳೂರು ವಿಜಯಪುರ ನಿವಾಸಿ ಸುಲ್ತಾನ್ ಮೊಹ್ಯುದ್ದೀನ್ ಜೀಲಾನಿ ಎಂಬವರು ದುಡಿಕುತನದಿಂದ ಚಲಾಯಿಸಿಕೊಂಡು ಬರುತ್ತಿದ್ದ ಕಾರು ಅವರಿಗೆ ಗುದ್ದಿದ ಪರಿಣಾಮ ಅಬ್ದುಲ್ ರಹಿಮಾನ್ ಅವರ ಭುಜ ಮತ್ತು ಎಡದ ಕಾಲಿನ ಮೂಳೆ ಮುರಿತವಾಗಿದೆ. ತಲೆ ಮತ್ತು ದೇಹದ ಇತರ ಭಾಗಗಳಿಗೂ ಗಾಯವಾಗಿದೆ. ತಕ್ಷಣ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಶಸ್ರ್ತಚಿಕಿತ್ಸೆ ಆವಶ್ಯಕತೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ಸಂಬಂಧ ಅವರ ಅಳಿಯ ಪತ್ರಕರ್ತ ಅಶ್ರಫ್ ಆಲಿಕುಂಞಿ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು