News Karnataka Kannada
Monday, April 29 2024
ಮಂಗಳೂರು

ಬೆಳ್ತಂಗಡಿ: ಮೆಹಂದಿ ಕಾರ್ಯಕ್ರಮಕ್ಕೆಂದು ಹೋಗಿದ್ದ ವ್ಯಕ್ತಿಯ ಅನುಮಾನಾಸ್ಪದ ಸಾವು

ಪ್ರೀತಿಸಿದವರೊಂದಿಗೆ ವಿವಾಹವಾಗದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ನರೇಗಲ್ಲ ಪಟ್ಟಣದಲ್ಲಿ ನಡೆದಿದೆ.
Photo Credit : IANS

ಬೆಳ್ತಂಗಡಿ: ರಾತ್ರಿ ಮೆಹಂದಿ ಕಾರ್ಯಕ್ರಮಕ್ಕೆಂದು ಹೋಗಿದ್ದ ವ್ಯಕ್ತಿ ಮನೆಗೆ ಹಿಂತಿರುಗದೆ ಇದ್ದು‌ ಆತನ ಮೃತದೇಹ ಗುರುವಾಯನಕೆರೆಯ ಕೆರೆಯಲ್ಲಿ ಪತ್ತೆಯಾದ ಘಟನೆ ಬುಧವಾರ ಸಂಭವಿಸಿದ್ದು ಈತನ ಅನುಮಾನಾಸ್ಪದ ಸಾವಿನ ಬಗ್ಗೆ ಮನೆಯವರ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತ ವ್ಯಕ್ತಿ ಕುವೆಟ್ಟು ಗ್ರಾಮದ ನಿವಾಸಿ ಪ್ರವೀಣ್ ಪಿಂಟೋ (37)ಎಂಬಾತನಾಗಿದ್ದಾನೆ. ಗುರುವಾಯನಕೆರೆಯಲ್ಲಿ ರಿಕ್ಷಾ ಚಾಲಕನಾಗಿ ಕೆಲಸ ಮಾಡುತ್ತಿರುವ ಪ್ರವೀಣ್ ಪಿಂಟೋ ಅವರು ಬುಧಾವರ ರಾತ್ರಿ ಮನೆಯಿಂದ ಓಡಿಲ್ನಾಳ ಗ್ರಾಮದ ಅಮರ್ ಜಾಲ್ ಎಂಬಲ್ಲಿಗೆ ಮೆಹಂದಿ ಕಾರ್ಯಕ್ರಮಕ್ಕೆಂದು ಹೋಗಿದ್ದ ಆತ ಮನೆಗೆ ಬಾರದಿದ್ದಾಗ ಪತ್ನಿ ಕರೆಮಾಡಿದಾಗ ರಾತ್ರಿ 1.39ಕ್ಕೆ ತಾನು ಮನೆಗೆ ಬರುತ್ತೇನೆ ಎಂದು ತಿಳಿಸಿದ್ದರು ಆದರೆ ಮನೆಗೆ ಹಿಂತಿರುಗಿರಲಿಲ್ಲ ಬಳಿಕ ಬೆಳಿಗ್ಗೆ ಪ್ರವೀಣನ ಡ್ರೈವಿಂಗ್ ಲೈಸನ್ಸ್ ಹಾಗೂ ದಾಖಲೆಗಳು ಕೆರೆಯ ಸಮೀಪ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ ಎಂದು ಅವರ ಪತ್ನಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಮೆಹಂದಿ ಮನೆಯಲ್ಲಿ ಪ್ರವೀಣ್ ಹಾಗೂ ಪ್ರದೀಪ್ ಶೆಟ್ಟಿ ಎಂಬವರ ಮದ್ಯೆ ಮಾತನ ಚಕಮಕಿ ಹಾಗೂ ಹೊಡೆದಾಟ ನಡೆದಿರುವ ವಿಚಾರ ಬಳಿಕ ತಿಳಿದು ಬಂದಿರುವುದಾಗಿಯೂ ರಾತ್ರಿ 3ಗಂಟೆಯ ಸುಮಾರಿಗೆ ತಮ್ಮ ಮನೆಯ ಸಮೀಪ ಕಾರೊಂದು ಬಂದು ಹೋಗಿರುವಯದಾಗಿಯೂ ಮೃತದೇಹದಲ್ಲಿ ಪ್ರವೀಣ್ ಧರಿಸಿದ್ದ ಕೆಂಪು ಟೀ ಶರ್ಟ್ ಇರಲಿಲ್ಲ ಎಂದೂ ಇದರಿಂದಾಗಿ ಪ್ರವೀಣ್ ಅವರ ಅಸಹಜ ಸಾವಿನ ಬಗ್ಗೆ ಹಲವಾರು ಅನುಮಾನವಿದ್ದು ಕ್ರಮ ಕೈಗೊಳ್ಖುವಂತೆ ಮೃತನ ಪತ್ನಿ ರೇಷ್ಮಾ ಬೆಳ್ತಂಗಡಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮಾಹಿತಿ ನೀಡಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ.

ಮೃತದೇಹ ಮೇಲೆತ್ತಿದ ಮುಳುಗು ತಜ್ಞರು:

ಗುರುವಾಯನಕೆರೆಯ ದಡದಲ್ಲಿ ರಿಕ್ಷಾ ಚಾಲಕನ ಚಪ್ಪಲಿ ಹಾಗೂ ದಾಖಲೆಗಳು ಸಿಕ್ಕಿದೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವದಂತಿಯ ಹಿನ್ನಲೆಯಲ್ಲಿ ಬೆಳ್ತಂಗಡಿ ಪೊಲೀಸರು ಅಗ್ನಿ ಶಾಮಕ ದಳದವರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು, ಸ್ಥಳೀಯರು ಸೇರಿ ಬೆಳಗ್ಗಿನಿಂದಲೇ ಹುಡುಕಾಟ ಆರಂಭಿಸಿದ್ದರು. ಬಳಿಕ ಮಂಗಳೂರಿನಿಂದ ಮುಳುಗು ತಜ್ಞರು ಆಗಮಿಸಿ ಮದ್ಯಾಹ್ನ ವೇಳೆ ಕೆರೆಯಿಂದ ಮೃತದೇಹವನ್ನು ಮೇಲಕ್ಕೆ ಎತ್ತಿದ್ದರು. ಮೃತರ ಮನೆಯವರು ಒಟ್ಟು ಪ್ರಕರಣದ ಬಗ್ಗೆ ಅನುಮಾನ ವ್ಯಕ್ತ ಪಡಿಸಿದ ಹಿನ್ನಲೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ.

ಆರಂಭದಲ್ಲಿ ಇದೊಂದು ಆತ್ಮಹತ್ಯೆ ಪ್ರಕರಣ ಎಂದೇ ಭಾವಿಸಲಾಗುತ್ತು ಆದರೆ ಇದೀಗ ಮೃತನ ಮನೆಯವರು ಹಲವಾರು ಅನುಮಾನಗಳನ್ನು ವ್ಯಕ್ತಪಡಿಸಿರುವ ಹಿನ್ಬಲೆಯಲ್ಲಿ ಪೊಲೀಸರು ಪ್ರಕರಣದ ಬಗ್ಗೆ ಸಮಗ್ರವಾದ ತನಿಖೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು