ಬೆಳ್ತಂಗಡಿ: ಲಾಯಿಲದ ಪ್ರಸನ್ನ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ , ಬೆಳ್ತಂಗಡಿ ರೋಟರಿ ಕ್ಲಬ್, ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಿಗಳ ಸಂಘ , ಸೇವಾ ಭಾರತಿ (ರಿ) ಕನ್ಯಾಡಿ ಹಾಗೂ ಕೆ.ಎಂ.ಸಿ.ಬ್ಲಡ್ ಬ್ಯಾಂಕ್ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಲಾಯಿಲ ಪ್ರಸನ್ನ ವಿದ್ಯಾ ಸಂಸ್ಥೆಯ ಆವರಣದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು.
ಪ್ರಸನ್ನ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷ, ಮಾಜೀ ಸಚಿವ ಗಂಗಾಧರ ಗೌಡ ಅವರು ಶಿಬಿರವನ್ನು ಉದ್ಘಾಟಿಸಿದರು. ಕಾರ್ಯಕ್ರಮ ದ ಅಧ್ಯಕ್ಷ ತೆಯನ್ನು ಕನ್ಯಾಡಿ ಸೇವಾಭಾರತಿ ಅಧ್ಯಕ್ಷ ಕೆ ವಿನಾಯಕ ರಾವ್ ಕನ್ಯಾಡಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ನ ಅಧ್ಯಕ್ಷೆ ಮನೋರಮಾ ಭಟ್, ಕಾರ್ಯದರ್ಶಿ ರಕ್ಷಾ ರಾಘ್ನೀಶ್, ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಎಂ.ಚಂದ್ರಶೇಖರ ಹಾಗೂ ಪ್ರಸನ್ನ ಆಯುರ್ವೇದಿಕ್ ಕಾಲೇಜಿನ ಪ್ರಿನ್ಸಿಪಾಲ್ ಡಾ.ಅಮಿತ್ ಖಾಡಿಲ್ಕರ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸೌತ್ ಕೆನರಾ ಡಿಸ್ಟ್ರಿಕ್ಟ್ ಕೆಮಿಸ್ಟ್ ಎಂಡ್ ಡ್ರಗ್ಗಿಸ್ಟ್ ಅಸೋಸಿಯೇಷನ್ ನ ಅಧ್ಯಕ್ಷ ಸುಜಿತ್ ಭಿಡೆ, ರೋಟರಿ ಕ್ಲಬ್ ಸದಸ್ಯರಾದ ಶ್ರೀಧರ ಕೆ ವಿ, ಕಿರಣ್ ಹೆಬ್ಬಾರ್, ಔಷಧ ವ್ಯಾಪಾರಸ್ಥರ ಸಂಘದ ನವೀನ ಚಂದ್ರ ಕೆ.ಎ., ಪ್ರಕಾಶ, ರಮೇಶ್ , ಸುದೀಪ್, ಶ್ರೀಮತಿ ಅಶ್ವಿನಿ ಹಾಗೂ ಕಾಲೇಜಿನ ಡಾ.!ವಿದ್ಯಾ ಅಡಿಗ , ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಈ ಶಿಬಿರದಲ್ಲಿ 150 ಯುನಿಟ್ ರಕ್ತ ಸಂಗ್ರಹಿಸಲಾಯಿತು.