ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದ ಎರ್ಮಾಯಿ ಫಾಲ್ಸ್ ಸಮೀಪದ ಏಳೂವರೆ ಹಳ್ಳದ ಕಲ್ಲಂಡ ಎಂಬಲ್ಲಿ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಧರ್ಮಸ್ಥಳ ಗ್ರಾಮದ ದೊಂಡೋಲೆ ನಿವಾಸಿ ಕೇಶವ ಭಂಡಾರಿ ಎಂಬವರ ಪುತ್ರ ಉಜಿರೆಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಿವೇಕ್ (17) ಈ ದುರ್ಘಟನೆಯಲ್ಲಿ ಮೃತಪಟ್ಟ ವಿದ್ಯಾರ್ಥಿ ಯಾಗಿದ್ದಾರೆ.
ಶನಿವಾರ ಮಧ್ಯಾಹ್ನ ನಂತರ ಕಾಲೇಜಿಗೆ ರಜೆ ಇದ್ದುದರಿಂದ ತನ್ನ ಆರೇಳು ಮಂದಿ ಸ್ನೇಹಿತರ ಜತೆ ಎರ್ಮಾಯಿ ಫಾಲ್ಸ್ ಗೆ ಹೋಗಿ, ತೊಟ್ಲಾಯಿ ಗುಂಡಿಯಲ್ಲಿ ಸ್ನಾನಕ್ಕೆ ಇಳಿದಿದ್ದ ಸಮಯ ಈ ಘಟನೆ ನಡೆದಿದೆ.
ಕಲ್ಲಂಡ ಪರಿಸರದ ತೊಟ್ಲಾಯಿ ಗುಂಡಿಯಲ್ಲಿ ಫಾಲ್ಸ್ ಗೆ ಬರುವ ಮಂದಿ ಸ್ನಾನಕ್ಕೆ ಇಳಿಯುವುದು ಸಾಮಾನ್ಯ. 2019ರ ನೆರೆಯ ಬಳಿಕ ಈ ಗುಂಡಿಯಲ್ಲಿ ಹೂಳು ತುಂಬಿದ್ದು ಅಷ್ಟೊಂದು ಆಳ ಇರಲಿಲ್ಲ. ಆದರೆ ಈ ವರ್ಷದ ಮಳೆಗೆ ಹೂಳು ಕೊಚ್ಚಿಕೊಂಡು ಹೋಗಿ ಗುಂಡಿ ಆಳವಾಗಿದೆ. ಇಲ್ಲಿ ಸ್ನಾನ ಮಾಡುವ ಸಮಯ ಬೊಬ್ಬೆ ಹೊಡೆಯುವುದು, ಕಿರುಚಾಟ ಇತ್ಯಾದಿ ಪ್ರವಾಸಿಗರು ಮಾಡುತ್ತಾ ಇರುವುದರಿಂದ ಈ ಬಗ್ಗೆ ಸ್ಥಳೀಯರು ಹೆಚ್ಚಾಗಿ ಗಮನಹರಿಸುವುದಿಲ್ಲ.
ಶನಿವಾರವು ಇದೇ ರೀತಿ ಆಗಿತ್ತು. ಸ್ಥಳೀಯರು ಮುನ್ನೆಚ್ಚರಿಕೆ ಹೇಳಿದ್ದರೂ ಪ್ರವಾಸಿಗರು ಆ ಬಗ್ಗೆ ಗಮನ ಹರಿಸದೆ, ಕೆಲವೊಮ್ಮೆ ವಾಗ್ವಾದಗಳನ್ನು ನಡೆಸುತ್ತಾ ನೀರಿಗೆ ಇಳಿಯುತ್ತಾರೆ ಎಂದು ಪರಿಸರದ ಮಂದಿ ತಿಳಿಸಿದ್ದಾರೆ. ಮೃತ ದೇಹವನ್ನು ಮೇಲೆತ್ತಲು ಸ್ಥಳೀಯರು ಸಹಕರಿಸಿದ್ದಾರೆ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…