ಬೆಳ್ತಂಗಡಿ : ಲಾಯಿಲದಲ್ಲಿ ಮನೆಯಿಂದ ಪೇಟೆಗೆಂದು ಸ್ಕೂಟರ್ನಲ್ಲಿ ಹೋಗುತ್ತಿದ್ದ ಯುವಕನೊಬ್ಬನನ್ನು ಕಾರಿನಲ್ಲಿ ಬಂದ ತಂಡ ಅಪಹರಿಸಿ ಅಳದಂಗಡಿ ಸಮೀಪದ ಕೆದ್ದು ಶಾಲೆಗೆ ಕರೆದೊಯ್ಯುದ್ದು ತೀವ್ರವಾಗಿ ಹಲ್ಲೆ ಮಾಡಿದ್ದ ಘಟನೆ ಭಾನುವಾರ ಸಂಭವಿಸಿದೆ.
ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಅಂಕಾಜೆ ನಿವಾಸಿ ಮ್ಯಾಕಾನಿಕ್ ಕೆಲಸ ಮಾಡುವ ನಿಶೇತ್(23) ಎಂಬತನೇ ಹಲ್ಲೆಗೆ ಒಳಗಾದ ಯುವಕನಾಗಿದ್ದಾನೆ. ಬೊಲೆರೋ ವಾಹನಲ್ಲಿ ಬಂದ ಸುಮಾರು ಏಂಟು ಮಂದಿಯ ತಂಡ ಯುವಕನ್ನು ಬಲತ್ಕಾರದಿಂದ ಎಳೆದೊಯ್ಯುದ್ದು ಸವಣಾಲು ರಸ್ತೆ ಮೂಲಕ ಅಳದಂಗಡಿಯ ಕೆದ್ದು ಶಾಲೆಯ ಆಟದ ಮೈದಾನಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಆತನ್ನಲ್ಲಿದ್ದ ಮೊಬೈಲ್ ಫೋನ್ ಮತ್ತು ಚಿನ್ನದ ಸರ ಕಸಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯ ಬಗ್ಗೆ ನಂತರ ಮಾಹಿತಿ ತಿಳಿದ ನಿಶೇತ್ ನ ಸ್ನೇಹಿತರು ಕೆದ್ದುವಿಗೆ ಹೋಗಿದ್ದು ಎರಡು ತಂಡದ ನಡುವೆ ಹೊಡೆದಾಟ ನಡೆದಿದೆ ಎನ್ನಲಾಗಿದೆ. ಯುವತಿಗೆ ಮೆಸೇಜ್ ಮಾಡಿದ್ದಾನೆ ಎಂಬ ವಿಚಾರಕ್ಕೆ ಈ ಹಲ್ಲೆ ನಡೆದಿದೆ ಎನ್ನಲಾಗಿದ್ದು ಇನ್ನೂ ಘಟನೆಯಬಗ್ಗೆ ಸ್ಪಷ್ಟವಾದ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ.
ಯುವಕನ ಅಪಹರಣ ವಾಗಿದೆ ಎಂಬ ಬಗ್ಗೆ ವೇಣೂರು ಠಾಣೆಗೆ ಮಾಹಿತಿ ನೀಡಿದ್ದು ವೇಣೂರು ಪೊಲೀಸರು ಕೆದ್ದುವಿಗೆ ಬಂದು ಕಿಡ್ನಾಪ್ ಮಾಡಿ ಹಲ್ಲೆ ಮಾಡಿದ ಐದು ಮಂದಿ ಆರೋಪಿಗಳನ್ನು ಊರವರ ಸಹಾಯದಿಂದ ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. ಇದೀಗ ಒಟ್ಟು ಪ್ರಕರಣದ ತನಿಖೆಯನ್ನು ಬೆಳ್ತಂಗಡಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ನಿಶೇತ್ ಗೆ ಮುಖ ಹಾಗೂ ಇನ್ನಿತರ ಭಾಗಕ್ಕೆ ಗಾಯವಾಗಿದ್ದು , ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬೆಳ್ತಂಗಡಿ ಪೊಲೀಸರು ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ