Categories: ಮಂಗಳೂರು

ಬೆಳ್ತಂಗಡಿ : ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಯುವಕ ಅಪಹರಣ

ಬೆಳ್ತಂಗಡಿ : ಲಾಯಿಲದಲ್ಲಿ ಮನೆಯಿಂದ ಪೇಟೆಗೆಂದು ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಯುವಕನೊಬ್ಬನನ್ನು ಕಾರಿನಲ್ಲಿ ಬಂದ ತಂಡ ಅಪಹರಿಸಿ ಅಳದಂಗಡಿ ಸಮೀಪದ ಕೆದ್ದು ಶಾಲೆಗೆ ಕರೆದೊಯ್ಯುದ್ದು ತೀವ್ರವಾಗಿ ಹಲ್ಲೆ ಮಾಡಿದ್ದ ಘಟನೆ ಭಾನುವಾರ ಸಂಭವಿಸಿದೆ.

ಬೆಳ್ತಂಗಡಿ ತಾಲೂ‌ಕಿನ ಲಾಯಿಲ ಗ್ರಾಮದ ಅಂಕಾಜೆ ನಿವಾಸಿ ಮ್ಯಾಕಾನಿಕ್ ಕೆಲಸ ಮಾಡುವ ನಿಶೇತ್(23) ಎಂಬತನೇ ಹಲ್ಲೆಗೆ ಒಳಗಾದ ಯುವಕನಾಗಿದ್ದಾನೆ. ಬೊಲೆರೋ ವಾಹನಲ್ಲಿ ಬಂದ ಸುಮಾರು ಏಂಟು ಮಂದಿಯ ತಂಡ ಯುವಕನ್ನು ಬಲತ್ಕಾರದಿಂದ ಎಳೆದೊಯ್ಯುದ್ದು ಸವಣಾಲು ರಸ್ತೆ ಮೂಲಕ ಅಳದಂಗಡಿಯ ಕೆದ್ದು ಶಾಲೆಯ ಆಟದ ಮೈದಾನಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಆತನ್ನಲ್ಲಿದ್ದ ಮೊಬೈಲ್ ಫೋನ್ ಮತ್ತು ಚಿನ್ನದ ಸರ ಕಸಿದ್ದಿದ್ದಾರೆ ಎನ್ನಲಾಗಿದೆ.

ಘಟನೆಯ ಬಗ್ಗೆ ನಂತರ ಮಾಹಿತಿ ತಿಳಿದ ನಿಶೇತ್ ನ ಸ್ನೇಹಿತರು ಕೆದ್ದುವಿಗೆ ಹೋಗಿದ್ದು ಎರಡು ತಂಡದ ನಡುವೆ ಹೊಡೆದಾಟ ನಡೆದಿದೆ ಎನ್ನಲಾಗಿದೆ. ಯುವತಿಗೆ ಮೆಸೇಜ್ ಮಾಡಿದ್ದಾನೆ ಎಂಬ ವಿಚಾರಕ್ಕೆ ಈ ಹಲ್ಲೆ ನಡೆದಿದೆ ಎನ್ನಲಾಗಿದ್ದು ಇನ್ನೂ ಘಟನೆಯಬಗ್ಗೆ ಸ್ಪಷ್ಟವಾದ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ.

ಯುವಕನ ಅಪಹರಣ ವಾಗಿದೆ ಎಂಬ ಬಗ್ಗೆ ವೇಣೂರು ಠಾಣೆಗೆ ಮಾಹಿತಿ ನೀಡಿದ್ದು ವೇಣೂರು ಪೊಲೀಸರು ಕೆದ್ದುವಿಗೆ ಬಂದು ಕಿಡ್ನಾಪ್‌ ಮಾಡಿ ಹಲ್ಲೆ ಮಾಡಿದ ಐದು ಮಂದಿ ಆರೋಪಿಗಳನ್ನು ಊರವರ ಸಹಾಯದಿಂದ ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. ಇದೀಗ ಒಟ್ಟು ಪ್ರಕರಣದ ತನಿಖೆಯನ್ನು ಬೆಳ್ತಂಗಡಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ನಿಶೇತ್ ಗೆ ಮುಖ ಹಾಗೂ ಇನ್ನಿತರ ಭಾಗಕ್ಕೆ ಗಾಯವಾಗಿದ್ದು , ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬೆಳ್ತಂಗಡಿ ಪೊಲೀಸರು ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ

Ashika S

Recent Posts

ಖಾಸಗಿ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಶಾಸಕ ಶರಣು ಸಲಗರ್‌

ಖಾಸಗಿ ಕಾರ್ಯಕ್ರಮದಲ್ಲಿ ಬಸವಕಲ್ಯಾಣ ಶಾಸಕ ಶರಣು ಸಲಗರ್‌ ಅವರು ಪತ್ನಿ ಹಾಗು ಮಕ್ಕಳೊಂದಿಗೆ ಹೆಜ್ಜೆ ಹಾಕಿದ್ದಾರೆ. ಶಾಸಕ ಶರಣು ಸಲಗರ್‌ರಿಂದ…

11 seconds ago

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಅರ್ಜಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…

31 mins ago

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

1 hour ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿಗೆ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

1 hour ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

2 hours ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

2 hours ago