ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕಲ್ಮಂಜ ಬಿ ಘಟಕದ ವತಿಯಿಂದ ಸಾರ್ವಜನಿಕರಿಗಾಗಿ ಕೆಸರ್ ಕಂಡೊಡು ನೇಜಿ ಗೌಜಿ ಕಾರ್ಯಕ್ರಮವು ಅಂತರ ಬೈಲು ಎಂಬಲ್ಲಿ ನಡೆಯಿತು
ಶಾಸಕ ಹರೀಶ್ ಪೂಂಜ ಗದ್ದೆಗೆ ಪೂಜೆ ಸಲ್ಲಿಸಿ,ಗದ್ದೆ ಉಳುಮೆ ಮಾಡಿ, ನೇಜಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಹಿರಿಯರ ಸಂಸ್ಕಾರ ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಕೃಷಿ ಬದುಕಿಗೆ ಬೇಕಾದ ಪದ್ಧತಿ ಅನಾವರಣಗೊಳ್ಳಲು ಗದ್ದೆ ಬೇಸಾಯ ಪ್ರಾಮುಖ್ಯವಾಗಿದೆ ಎಂದರು.
ಗೌಡರ ಯಾನೆ ಒಕ್ಕಲಿಗ ಸೇವಾ ಸಂಘ ಕಲ್ಮಂಜ ಬಿ ಘಟಕ ಗೌರವಾಧ್ಯಕ್ಷರಾದ ರಮೇಶ್ ಗೌಡ ಗುಲ್ಲೋಡಿ, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕಲ್ಮಂಜ ಬಿ ಘಟಕದ ಅಧ್ಯಕ್ಷರಾದ ರಾಘವ ಗೌಡ,
ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿಯ ಗೌರವಾಧ್ಯಕ್ಷ ಪದ್ಮ ಗೌಡ, ಅಧ್ಯಕ್ಷ ಕುಶಾಲಪ್ಪ ಗೌಡ, ನಿರ್ದೇಶಕರಾದ ಜಯಾನಂದ ಗೌಡ, ತನಿಯಪ್ಪ ಗೌಡ, ಜಿಲ್ಲಾ ಯುವ ವೇದಿಕೆ ಕಾರ್ಯದರ್ಶಿ ಗಣೇಶ್ ಗೌಡ ಕಲಾಯಿ, ವಾಣಿ ಸೌಹಾರ್ದ ಕೋ – ಆಪರೇಟಿವ್ ಸೊಸೈಟಿ ನಿರ್ದೇಶಕ ಬಿ ಗೋಪಾಲಕೃಷ್ಣ ಗುಲ್ಲೋಡಿ, ಸ್ಪಂದನ ಸೇವಾ ಸಂಘದ ಸಂಚಾಲಕರಾದ ಸುರೇಶ್ ಕೌಡಂಗೆ
ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಯುವ ವೇದಿಕೆಯ ಅಧ್ಯಕ್ಷರಾದ ಯಶವಂತ ಗೌಡ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ವಿವಿದ ಆಟೋಟ ಸ್ಪರ್ಧೆಗಳು ನಡೆದವು. ಹಡೀಲು ಬಿದ್ದ ಗದ್ದೆಯಲ್ಲಿ ನಡೆದಿದ್ದು ಗದ್ದೆಯಲ್ಲಿ ನೇಜಿ ನಾಟಿ ಮಾಡಲಾಯಿತು.
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ…
ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…
ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…
ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…
ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…
ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…