ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಒಂದನೇ ತಿರುವಿನ ಬಳಿ ಆಂಬುಲೆನ್ಸ್ ಹಾಗೂ ಟ್ಯಾಂಕರ್ ಡಿಕ್ಕಿ ಹೊಡೆದು ಸುಮಾರು ಒಂದು ಗಂಟೆ ಕಾಲ ಟ್ರಾಫಿಕ್ ಜಾಮ್ ಉಂಟಾದ ಘಟನೆ ಗುರುವಾರ ರಾತ್ರಿ ನಡೆಯಿತು.
ಸಂಜೆ ಸಮಯ ಇದೆ ಜಾಗದ ಅನತಿ ದೂರದಲ್ಲಿ ಇನ್ನೊಂದು ಆಂಬುಲೆನ್ಸ್ ಹಾಗೂ ರಿಕ್ಷಾ ಪರಸ್ಪರ ಡಿಕ್ಕಿಯಾಗಿತ್ತು.ರಾತ್ರಿ ಇನ್ನೊಂದು ಆಂಬುಲೆನ್ಸ್ ಲಾರಿ ಪರಸ್ಪರ ಡಿಕ್ಕಿಯಾಗಿದೆ.
ಪ್ರದೇಶದಲ್ಲಿ ಸಂಜೆ ಸುರಿದ ವಿಪರೀತ ಮಳೆಗೆ ರಸ್ತೆ ಜಾರುತ್ತಿದದ್ದು ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ತಿಳಿಸಿದ್ದಾರೆ.
ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.