ಬೆಳ್ತಂಗಡಿ: ನೀರು ಮಲಿನವಾಗುವುದನ್ನು ತಡೆಯವ ಉದ್ದೇಶದಿಂದ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದಲ್ಲಿ ಸೋಪ್ ಹಾಗೂ ಶಾಂಪುಗಳನ್ನು ಮಾರುವುದನ್ನು ನಿರ್ಬಂಧಿಸಲಾಗಿದೆ.
ಅಲ್ಲದೆ ಯಾತ್ರಿಕರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸು ಕಾರ್ಯವನ್ನು ಮಾಡಲಾಗುತ್ತಿದೆ ಎಂದು ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ. ಧರ್ಮಸ್ಥಳ ಸ್ನಾನಘಟ್ಟದಲ್ಲಿ ಸ್ವಚ್ಛತೆ ಕಾಪಾಡುವ ಉದ್ದೇಶದಿಂದ ಯಾತ್ರಿಕರಿಗೆ ಧ್ವನಿವರ್ಧಕದ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಆದರೆ ನದಿಗೆ ಬಟ್ಟೆ ಎಸೆಯುವುದು, ಶಾಂಪೂ ಪೌಚ್ಗಳನ್ನು ಎಸೆಯುವ ಕ್ರಮಗಳು ಮುಂದುವರಿದಿದೆ. ಈ ಕಾರಣದಿಂದ ಸುತ್ತಮುತ್ತಲ ಪ್ರದೇಶಗಳಲ್ಲಿ ಸೋಪ್, ಶಾಂಪೂ ಮಾರಾಟಕ್ಕೆ ನಿಯಂತ್ರಣ ಹೇರಲಾಗಿದೆ.