News Karnataka Kannada
Thursday, May 02 2024
ಮಂಗಳೂರು

ಬೆಳ್ತಂಗಡಿ: ನಿಷೇಧಿತ ಸಾಟಲೈಟ್ ಫೋನ್ ಕರೆ, ಬೆಂದ್ರಾಳ ಪ್ರದೇಶದಲ್ಲಿ ಪೊಲೀಸರಿಂದ ತನಿಖೆ

Belthangady: Banned satellite phone call, police probe in Bandrala area
Photo Credit : By Author

ಬೆಳ್ತಂಗಡಿ: ಮಂಗಳೂರಿನಲ್ಲಿ ಶಂಕಿತ ಉಗ್ರ ಶಾರೀಕ್ ನಿಂದ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ನಡೆಸಿದ ಹಿಂದಿನ ದಿನ ಬೆಳ್ತಂಗಡಿಯ ಬೆಂದ್ರಾಳದಲ್ಲಿ ನಿಷೇಧಿತ ಸಾಟಲೈಟ್ ಫೋನ್ ಕರೆ ಹೋಗಿರುವುದು ಬೆಳಕಿಗೆ ಬಂದಿದೆ.‌ಈ ಹಿನ್ನಲೆಯಲ್ಲಿ ಧರ್ಮಸ್ಥಳ ಪೊಲೀಸರಿಂದ ಶನಿವಾರ ಬೆಂದ್ರಾಳ ಪ್ರದೇಶದಲ್ಲಿ ತನಿಖೆ ಮತ್ತಷ್ಟು ಚುರುಕುಗೊಳಿಸಲಾಗಿದೆ.

ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಬೆಂದ್ರಾಳ ಅರಣ್ಯ ಪ್ರದೇಶದಿಂದ ನವಂಬರ್ 18 ರಂದು ಸಂಜೆ 5 ಗಂಟೆಗೆ ನಿಷೇಧಿತ ಸಾಟಲೈಟ್ ಫೋನ್ ಕರೆ ಹೋಗಿರುವ ಬಗ್ಗೆ ಕೇಂದ್ರ ಅಧಿಕಾರಿಗಳಿಗೆ ಮಾಹಿತಿ ಲಭಿಸಿದ್ದು ಅದರಂತೆ ಆಂತರಿಕ ಭದ್ರತಾ ಇಲಾಖೆ ಹಾಗೂ ಸ್ಥಳೀಯ ಪೊಲೀಸರಿಗೆ ತನಿಖೆ ಮಾಡಲು ಮಾಹಿತಿ ರವಾನಿಸಿದ್ದಾರೆ.

ಧರ್ಮಸ್ಥಳ ಪೊಲೀಸರು ಹಾಗೂ ಮಂಗಳೂರು ಆಂತರಿಕ ಭದ್ರತಾ ಇಲಾಖೆಯ ಇನ್ಸ್ಪೆಕ್ಟರ್ ಚಿಂದನಂದ್ ಮತ್ತು ತಂಡ ಶುಕ್ರವಾರ ಬೆಂದ್ರಾಳ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಶನಿವಾರ ಮತ್ತೆ ಧರ್ಮಸ್ಥಳ ಪೊಲೀಸ್ ಠಾಣೆಯ ಪಿಎಸ್ಐ ಅನಿಲ್ ಕುಮಾರ್ ಡಿ ಮತ್ತು ತಂಡ ತೋಟತ್ತಾಡಿ ಗ್ರಾಮದ ಬಾರೆಮನೆ ನಿವಾಸಿಗಳಾದ ರುಕ್ಮಯ ಗೌಡ ಮನೆ ಮತ್ತು ಚೆಲುವಮ್ಮ ಮನೆಯಲ್ಲಿ ಮಾಹಿತಿ ಸಂಗ್ರಹಿಸಿ ಬೆಂದ್ರಾಳ ಸುತ್ತಮುತ್ತಲಿನ ಸುಮಾರು ಐದು ಕಿಮೀ ಅರಣ್ಯ ಪ್ರದೇಶದೊಳಗೆ ಹುಡುಕಾಟ ನಡೆಸಿ ನಂತರ ಸಾಟಲೈಟ್ ಕರೆ ಹೋದ ಸ್ಥಳವನ್ನು ಅತಣ್ಯದಲ್ಲಿ ಪತ್ತೆ ಹಚ್ವಿದ್ದು ಈ ಪ್ರದೇಶದಲ್ಲಿ ಪರಿಶೀಲನೆ ನಡೆಸಿದರು. ಆದರೆ ಇಲ್ಲಿ ಯಾವುದೇ ಇತರ ಕುರುಹುಗಳು ಪತ್ತೆಯಾಗಿಲ್ಲ. ಪೊಲೀಸರು ಒಟ್ಟಾರೆಯಾಗಿ ಈ ಪ್ರದೇಶದಲ್ಲಿ ಮಾಹಿತಿ ಸಂಗ್ರಹಿಸುವ ಕಾರ್ಯ ಮಾಡುತ್ತಿದ್ದಾರೆ.

ಸಾಟಲೈಟ್ ಕರೆ ಹೋದ ಪ್ರದೇಶಕ್ಕೆ ಧರ್ಮಸ್ಥಳ ಪೊಲೀಸ್ ಠಾಣೆಯ ಪಿಎಸ್ಐ ಅನಿಲ್ ಕುಮಾರ್ ಡಿ ನೇತೃತ್ವದಲ್ಲಿ ಸಿಬ್ಬಂದಿಗಳಾದ ಮಹಮ್ಮದ್ ಅಸ್ಲಾಮ್ , ಪ್ರಶಾಂತ್, ರಾಜೇಶ್ ಹಾಗೂ ಸ್ಥಳೀಯರಾದ ಮೋಹನ್ ಗೌಡ, ಉಮೇಶ್.ಬಿ , ಸತೀಶ್ ಬಳ್ಳಿ , ಕಾರ್ತಿಕ್ ಪೊಲೀಸರಿಗೆ ಕಾಡಿನಲ್ಲಿ ದಾರಿತೋರಿಸಲು ಸಹಕರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು