ಬೆಳ್ತಂಗಡಿ: ಸಮಗ್ರ ರಾಷ್ಟೀಯತೆಗೋಸ್ಕರ ಬಿಜೆಪಿ ಪಕ್ಷವು ಕೆಲಸ ಮಾಡುತ್ತಿದ್ದು, ಸಶಕ್ತ ಮತ್ತು ವೈಚಾರಿಕತೆಯ ಆಧಾರದಲ್ಲಿ ದೇಶದ ಪುನರ್ ನಿರ್ಮಾಣ ಸಾಧ್ಯವಿದೆ ಎಂದು ಬಿಜೆಪಿ ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ ಹೇಳಿದರು.
ಅವರು ಬುಧವಾರ ನಿಡ್ಲೆ ಆದಿತ್ಯ ವ್ಯೂನ ಪಂಚವಟಿ ಸಭಾಭವನದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾ ಮಟ್ಟದ ಎರಡು ದಿನಗಳ ಪ್ರಶಿಕ್ಷಣ ವರ್ಗವನ್ನು ಉದ್ಘಾಟಿಸಿದರು
ಕೇಂದ್ರದಲ್ಲಿ ನರೇಂದ್ರ ಮೋದಿಜಿಯವರ ಆಡಳಿತದ ನಂತರ ದೇಶದಲ್ಲಿ ಆತ್ಮನಿರ್ಭರದ ಫಲವಾಗಿ ದೇಶ ಸಶಕ್ತವಾಗುತ್ತಿದೆ.
ಇಂದು ದೇಶದ ಮಹಿಳೆಯರು ಹೆಮ್ಮೆ ಪಡುವಂತೆ ದೇಶದ ಉನ್ನತ ಹುದ್ದೆ ರಾಷ್ಟಪತಿ ಬಿಜೆಪಿಯಲ್ಲಿ ಕೆಲಸ ಮಾಡಿದ ಓರ್ವ ಬುಡಗಟ್ಟು ಮಹಿಳೆಗೆ ಸಿಕ್ಕಿರುವುದು ಮಹಿಳೆಯರಿಗೆ ಸಂದ ಗೌರವ ಎಂದರು. ಬಿಜೆಪಿ ಮಹಿಳಾ ಮೋರ್ಚ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪ ಜಿ. ಸುವರ್ಣ ಮಾತನಾಡಿ, ರಾಷ್ಟ್ರೀಯ ಸಮಿತಿಯ ಸೂಚನೆಯಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರಶಿಕ್ಷಣ ನಡೆಯಲಿದ್ದು, ಈಗಾಗಲೆ 16 ಜಿಲ್ಲೆಗಳಲ್ಲಿ ನಡೆದಿದೆ. ಈ ತಿಂಗಳ ಅಂತ್ಯದೊಳಗೆ ಎಲ್ಲಾ ಜಿಲ್ಲೆಗಳಲ್ಲಿ ಪ್ರಶಿಕ್ಷಣ ವರ್ಗ ಮುಗಿಯಲಿದೆ ಎಂದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೊರಗಪ್ಪ ನಾಯ್ಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಜಿಲ್ಲಾ ಕಾರ್ಯದರ್ಶಿಗಳಾದ ಧನಲಕ್ಷ್ಮೀ ಜನಾರ್ದನ್, ಪೂಜಾ ಪೈ, ಮಹಿಳಾ ಮೋರ್ಚಾ ರಾಜ್ಯ ಸಮಿತಿ ಸದಸ್ಯೆ ಭಾಗೀರಥಿ ಮುರುಳ್ಯ, ಪ್ರಶಿಕ್ಷಣ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಕೃಷ್ಣ ಶೆಟ್ಟಿ ಕಡಬ, ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲದ ಅಧ್ಯಕ್ಷೆ ವಿಜಯಾ ಆರಂಬೋಡಿ, ನಿಡ್ಲೆ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ ಇದ್ದರು.
ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಧನಲಕ್ಷ್ಮೀ ಗಟ್ಟಿ ಅಧ್ಯಕ್ಷತೆ ವಹಿಸಿ, ಪ್ರಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ತ್ರಿವೇಣಿ ಪೆರ್ವೊಡಿ ಸ್ವಾಗತಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೇವಂತಿ ವಂದಿಸಿದರು. ಕಾರ್ಯದರ್ಶಿ ಗೀತಾ ರಾಮಣ್ಣ ಗೌಡ ಕಾರ್ಯಕ್ರಮ ನಿರೂಪಿಸಿದರು.