News Karnataka Kannada
Tuesday, April 30 2024
ಮಂಗಳೂರು

ಬೆಳ್ತಂಗಡಿ: ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ಅವರಿಗೆ ಬಿಜೆಪಿ ಎಸ್ ಟಿ ಮೋರ್ಚಾ ದಿಂದ ಅಭಿನಂದನೆ

BJP ST Morcha felicitates Draupadi Murmu, a tribal
Photo Credit : By Author

ಬೆಳ್ತಂಗಡಿ: ಆದಿವಾಸಿ ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿಯಾಗಿ ಆಯ್ಕೆ ಮಾಡಿದ ಕೇಂದ್ರದ ಎನ್ ಡಿ ಎ ಸರಕಾರಕ್ಕೆ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಯವರಿಗೆ ಬಿಜೆಪಿ ದ.ಕ. ಜಿಲ್ಲಾ ಎಸ್.ಟಿ. ಮೋರ್ಚಾದಿಂದ ಕೃತಜ್ಞತೆಗಳು ಹಾಗು ಆಯ್ಕೆಯಾದ ನೂತನ ರಾಷ್ಟ್ರಪತಿಗೆ ಅಭಿನಂದನೆಗಳು ಎಂದು ಬಿಜೆಪಿ ಎಸ್. ಟಿ. ಮೋರ್ಚಾ ಜಿಲ್ಲಾ ಅಧ್ಯಕ್ಷ ಚೆನ್ನಕೇಶವ ಅರಸಮಜಲು ಹೇಳಿದರು ಅವರು ಗುರುವಾಯನ ನವಶಕ್ತಿ ರೆಶಿಡೆನ್ಸಿಯಲ್ ಹಾಲ್ ನಲ್ಲಿ ಕರೆದ ಸುದ್ದಿಗೋಷ್ಠಿ ಮಾತನಾಡಿದರು.

ಕೇಂದ್ರ ಸರಕಾರದಲ್ಲಿ ಎನ್ ಡಿ ಎ ಅಧಿಕಾರಕ್ಕೆ ಬಂದ ಮೋದಿ ಯವರ ನೇತೃತ್ವದಲ್ಲಿ ಪರಿಶಿಷ್ಟ ಜನಾಂಗ, ಬುಡಕಟ್ಟು ಸಮಾಜದ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವ ಮೂಲಕ ಉತ್ತಮ ಆಡಳಿತ ನೀಡಿದೆ.

ರಾಷ್ಟ್ರಪತಿ ಆಯ್ಕೆಗೆ ಮೂರು ಬಾರಿ ಅವಕಾಶ ಸಿಕ್ಕಿದಾಗ ಮುಸ್ಲಿಂ ಸಮುದಾಯದ ಡಾ. ಅಬ್ದುಲ್ ಕಲಾಂ, ಎಸ್ ಸಿ ಸಮುದಾಯದ ರಮಾನಾಥ್ ಕೊವಿಂದ್, ಹಾಗು ಈ ಬಾರಿ ಎಸ್ ಟಿ. ಮೋರ್ಚಾದ ದ್ರೌಪದಿ ಮುರ್ಮು ಇವರನ್ನು ಆಯ್ಕೆ ಮಾಡಿದ್ದಾರೆ ಈ ಆಯ್ಕೆಯಿಂದ ಅದಿವಾಸಿ ಬುಡಕಟ್ಟು ಜನಾಂಗದ ಮಹಿಳೆಯನ್ನು ನೇಮಿಸಿ ವಿಶ್ವವೇ ಭಾರತ ವನ್ನು ಮೆಚ್ಚುವಂತೆ ಮಾಡಿದೆ.

ಇದರಿಂದ ಬುಡಕಟ್ಟು ಜನಾಂಗದವರು ಅತ್ಯುತ್ತಮ ಸ್ಥಾನವನ್ನು ಅಲಂಕರಿಸ ಬಹುದು ಎಂದು ತೋರಿಸಿ ಕೊಟ್ಟಿದ್ದಾರೆ, ದ್ರೌಪದಿಯವರು ರಾಜಕೀಯವಾಗಿ ಹಲವು ಹುದ್ದೆಗಳ ಮೂಲಕ ಸೇವೆ ಸಲ್ಲಿಸಿ, ಜಾರ್ಕಂಡ್ ರಾಜ್ಯದ ರಾಜ್ಯಪಾಲೆಯಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ಬಿ ಜೆ ಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್,ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರ್,ಎಸ್ ಟಿ ಮೋರ್ಚಾ ತಾಲೂಕು ಅಧ್ಯಕ್ಷ ಹರೀಶ್ ಎಳನೀರು, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ , ಎಸ್ ಟಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲೋಕೇಶ್ ಕಾರ್ಯದರ್ಶಿ ಅಶೋಕ ನಾಯ್ಕ, ಉಪಸ್ಥಿತರಿದ್ದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು