News Karnataka Kannada
Saturday, May 04 2024
ಮಂಗಳೂರು

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಹೊಂಡ ಮುಚ್ಚುವ ಕಾರ್ಯಕ್ಕೆ ಮುಂದಾದ ಬಿಜೆಪಿ ಕಾರ್ಯಕರ್ತರು

Belthangady: BJP workers take up the task of filling up a pothole on national highway
Photo Credit : By Author

ಬೆಳ್ತಂಗಡಿ: ಹೊಂಡಗಳಿಂದ ತುಂಬಿ ಹೋಗಿರುವ ರಾಷ್ಟ್ರೀಯ ಹೆದ್ದಾರಿಗೆ ನಾಗರಿಕರೇ ಶ್ರಮದಾನದ ಮೂಲಕ ತೇಪೆ ಹಾಕುವ ಪರಿಸ್ಥಿತಿ ಬಂದೊದಗಿರುವುದು ವಿಪರ್ಯಾಸವಾಗಿದೆ.

ತಾಲೂಕಿನಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ ತೀರ ಹದಗೆಟ್ಟಿದ್ದು ಹೊಂಡ ಗುಂಡಿಗಳಿಂದ ಆವೃತವಾಗಿದೆ. ಈ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪಟ್ಟಣ ಹಾಗೂ ಲಾಯಿಲ ಬಿಜೆಪಿ ಕಾರ್ಯಕರ್ತರು ಜಲ್ಲಿ ಹಾಗೂ ಸಿಮೆಂಟ್ ಮಿಶ್ರಿತ ರೆಡಿಮೆಕ್ಸ್ ಬಳಸಿ ತೇಪೆ ಕಾರ್ಯಕ್ಕೆ ಮುಂದಾದರು.

ಹೆದ್ದಾರಿ ಇಲಾಖೆಯಿಂದ ಯಾವುದೇ ನಿರ್ವಹಣೆ ತೋರದ ಹಿನ್ನೆಲೆ ಯುವಕರೇ ರಾತ್ರಿ ಹೊತ್ತು ಸುಮಾರು 5 ರಿಂದ 6 ಲೋಡ್ ಸಿಮೆಂಟ್ ಬಳಸಿ ತೇಪೆ ಕಾರ್ಯ ನಡೆಸಿದರು‌. ನಿದ್ರೆಯಲ್ಲಿರುವ ಇಲಾಖೆ ಇನ್ನಾದರೂ ಎಚ್ಚೆತ್ತು ಕೊಳ್ಳಬೇಕಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು