News Karnataka Kannada
Sunday, May 05 2024
ಮಂಗಳೂರು

ಬೆಳ್ತಂಗಡಿ: ರಕ್ತದಾನ ಜೀವ ಉಳಿಸುವ ಪುಣ್ಯ ಕಾರ್ಯ ಎಂದ ಕೆ.ವಸಂತ ಬಂಗೇರ

Blood donation is a life-saving act, says K Vasantha Bangera
Photo Credit : By Author

ಬೆಳ್ತಂಗಡಿ : ‘ ರಕ್ತದಾನ ಜೀವ ಉಳಿಸುವ ಬದುಕಿನ ಪುಣ್ಯದ ಕಾರ್ಯ.ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡುವ ಶ್ರೇಷ್ಠ ಕಾರ್ಯವನ್ನು ಮಾಡಬೇಕು’ ಎಂದು ಮಾಜಿ ಶಾಸಕ ಕೆ.ವಸಂತ ಬಂಗೇರ ಹೇಳಿದರು.

ಅವರು ತನ್ನ 78 ನೇ ಹುಟ್ಟು ಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಆಸ್ಪತ್ರೆ ಹಾಗೂ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಘ (ರಿ) ಮಂಗಳೂರು, ರೆಡ್ ಸೊಸೈಟಿ ಬೆಳ್ತಂಗಡಿ ಹಾಗೂ ಶ್ರೀ ಗುರುದೇವ ಎಜುಕೇಶನ್ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ಸಹಯೋಗದೊಂದಿಗೆ ನಡೆಸಿದ ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

‘ಈ ಪ್ರಕೃತಿಯಲ್ಲಿ ಕೃತಕವಾಗಿ ತಯಾರು ಮಾಡಲು ಅಸಾಧ್ಯವಾದುದು ರಕ್ತ. ವ್ಯಕ್ತಿಯೊಬ್ಬರಿಗೆ ರಕ್ತದಾನ ಮಾಡುವುದು ನಮ್ಮ ಜೀವದಾನ ಮಾಡುವುದಕ್ಕೆ ಸಮಾನ. ನಮ್ಮಿಂದ ಆಸ್ತಿ ಸಂಪತ್ತು ದಾನ ಮಾಡಲು ಅಸಾಧ್ಯವಾದರೂ ರಕ್ತದಾನ ಮಾಡುವ ಸಂಕಲ್ಪವನ್ನು ಪ್ರತಿಯೊಬ್ಬರೂ ತನ್ನ ಬದುಕಿನ ಉದ್ದಕ್ಕೂ ಇಟ್ಟುಕೊಳ್ಳಬೇಕು’ ಎಂದರು.

ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಸ್ವತಃ ರಕ್ತದಾನ ಮಾಡಿ ಮಾತನಾಡಿ,’ ವಸಂತ ಬಂಗೇರರು ಸಮಸ್ತ ಸಮಾಜದ ಆಸ್ತಿಯಾಗಿದ್ದಾರೆ. ಅವರು ಎಲ್ಲರಿಗೂ ಪ್ರೇರಣಾದಾಯಕ ವ್ಯಕ್ತಿತ್ವ ಬೆಳೆಸಿಕೊಂಡವರು. ಅವರ ಅಭಿಮಾನಿಗಳು ರಕ್ತದಾನ ಶಿಬಿರದ ಮೂಲಕ ಅವರ ಹುಟ್ಟು ಹಬ್ಬವನ್ನು ಆಚರಿಸುತ್ತಿರುವುದು ಮಾದರಿ ಕಾರ್ಯ’ ಎಂದರು.

ರೆಡ್ ಕ್ರಾಸ್ ಸಂಸ್ಥೆಯ ಬೆಳ್ತಂಗಡಿ ಘಟಕದ ಅಧ್ಯಕ್ಷ ಶಿವಕುಮಾರ್ ಎಸ್.ಎಂ. ಮಾತನಾಡಿ, ‘ ವಸಂತ ಬಂಗೇರ ತಾಲ್ಲೂಕಿನ ಅಪರೂಪದ ರಾಜಕಾರಣಿ. ಸೋತರೂ ಗೆದ್ದರೂ ಜನರ ಮಧ್ಯೆ ಇದ್ದು ಜನರ ಸಮಸ್ಯೆಗೆ ಸ್ಪಂದಿಸುವವರು. ಅವರ ಹುಟ್ಟು ಹಬ್ಬದ ದಿನ ಅವರ ಅಭಿಮಾನಿಗಳು ಹಮ್ಮಿಕೊಂಡಿರುವ ರಕ್ತದಾನ ಕಾರ್ಯ ಸಾರ್ಥಕ ಕಾರ್ಯ’ ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಾಹುಲ್ ಹಮೀದ್, ವಕೀಲ ಮನೋಹರ್ ಕುಮಾರ್, ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ಸವಿತಾ ಶುಭ ಹಾರೈಸಿದರು. ವೇದಿಕೆಯಲ್ಲಿ ಬೆಳ್ತಂಗಡಿ ರೆಡ್ ಕ್ರಾಸ್ ಸೊಸೈಟಿಯ ಕಾರ್ಯದರ್ಶಿ ಯಶವಂತ ಪಟವರ್ಧನ್, ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಇದ್ದರು.

ಶ್ರೀ ಗುರುದೇವ ಪದವಿ ಪೂರ್ವ ಮತ್ತು ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಕೆ. ವಸಂತ ಬಂಗೇರ ರನ್ನು ಗೌರವಿಸಲಾಯಿತು.

ಬೆಳ್ತಂಗಡಿ ರೆಡ್ ಕ್ರಾಸ್ ಸೊಸೈಟಿಯ ಸದಸ್ಯರಾದ ಶಿವಕುಮಾರ್ ಎಸ್.ಎಂ ಸ್ವಾಗತಿಸಿದರು. ಆಶಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು. ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಸಮೀವುಲ್ಲಾ ವಂದಿಸಿದರು.

ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವ ಸಿದ್ಧಾಂತಗಳನ್ನು ಬದುಕಿನಲ್ಲಿ ಪಾಲಿಸುತ್ತಾ ಬಂದವರು ಕೆ. ವಸಂತ ಬಂಗೇರರು. ಶಿಕ್ಷಣ ಮತ್ತು ಸಂಘಟನೆಗೆ ಹೆಚ್ಚು ಒತ್ತು ಕೊಟ್ಟವರು. ಅವರು ಆರಂಭಿಸಿದ ಶ್ರೀ ಗುರುದೇವ ವಿದ್ಯಾ ಸಂಸ್ಥೆ ಕರಾವಳಿ ಭಾಗದ ಶ್ರೇಷ್ಠ ಸಂಸ್ಥೆಯಾಗಿ ಬೆಳೆಯುವುದರಲ್ಲಿ ಅನುಮಾನವಿಲ್ಲ ಎಂದು ರಕ್ಷಿತ್ ಶಿವರಾಂ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು