ಬೆಳ್ತಂಗಡಿ: ತಾಲೂಕಿನ ಓಡಿಲ್ನಾಳ ಗ್ರಾಮದ ಮೈರಲ್ಕೆ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪಧಾದಿಕಾರಿಗಳ ಹಾಗೂ ವಿವಿಧ ಸಮಿತಿಗಳ ಸಂಚಾಲಕರ ಆಯ್ಕೆ ಹಾಗೂ ಪೂರ್ವ ತಯಾರಿ ಸಭೆ ನ. 12ರಂದು ಬೆಳ್ತಂಗಡಿ ಶಾಸಕ ಹಾಗೂ ಬ್ರಹ್ಮ ಕಲಶ ಸಮಿತಿ ಅಧ್ಯಕ್ಷ. ಹರೀಶ್ ಪೂಂಜ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜ,ಡಿಸೆಂಬರ್ ತಿಂಗಳಿನಲ್ಲಿ ನಡೆಯುವ ಕಿರಾತಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಕೆಲಸಗಳು ಭರದಿಂದ ಸಾಗುತ್ತಿದೆ. ಊರವರ ಶ್ರಮದಾನದಿಂದ ಸುಂದರವಾದ ದೇವಾಲಯ ನಿರ್ಮಾಣಗೊಳ್ಳುತ್ತಿದ್ದು,ಮುಂಬರುವ ದಿನಗಳಲ್ಲಿ ಬ್ರಹ್ಮಕಲಶ ನಡೆಯಲಿದೆ. ಅದಕ್ಕೆ ಬೇಕಾದ ಪೂರ್ವ ತಯಾರಿಯನ್ನು ಮಾಡಿಕೊಳ್ಳಬೇಕು.ಬ್ರಹ್ಮಕಲಶ ಯಶಸ್ವಿತಾಗಲು ದೇವಸ್ಥಾನಕ್ಕೆ ಸಂಬಂದಪಟ್ಟ ಗ್ರಾಮದ ಪ್ರತಿ ಮನೆಯವರ ಪಾಲ್ಗೊಳ್ಳುವಿಕೆ ಅಗತ್ಯವಾಗಿದೆ. ಎಲ್ಲರೂ ಒಟ್ಟಾಗಿ ಸೇರಿಕೊಂಡು ದೇವಸ್ಥಾನದ ಬ್ರಹ್ಮಕಲಶೋತ್ಸವ ಯಶಸ್ವಿಗೊಳಿಸೋಣ ಎಂದು ಅವರು ಸಲಹೆ ಸೂಚನೆಗಳನ್ನು ನೀಡಿದರು.
ಕ್ಷೇತ್ರದ ತಂತ್ರಿಗಳಾದ ನಂದ ಕುಮಾರ್ ಅವರ ಉಪಸ್ಥಿತಿಯಲ್ಲಿ ಶಾಸಕ, ಬ್ರಹ್ಮ ಕಲಶ ಸಮಿತಿ ಅಧ್ಯಕ್ಷ ಹರೀಶ್ ಪೂಂಜ, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಜಯರಾಮ ಶೆಟ್ಟಿ ಪಡಂಗಡಿ ಹಾಗೂ ಧರ್ಮೋತ್ಥಾನ ಟ್ರಸ್ಟ್ ಅಧ್ಯಕ್ಷ ವೃಷಭ ಆರಿಗ ಅವರ ನೇತೃತ್ವದಲ್ಲಿ ವಿವಿಧ ಸಮಿತಿಗಳನ್ನು ರಚಿಸಲಾಯಿತು.
ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ ಗೋಪಾಲ ಶೆಟ್ಟಿ ಕೋರ್ಯಾರು. ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಧ್ಯಕ್ಷ ರಾಜ್ ಪ್ರಕಾಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಧರಣೇಂದ್ರ ಕೆ ಜೈನ್, ಯುವ ಸಮಿತಿ ಅಧ್ಯಕ್ಷ ಚಿದಾನಂದ ಇಡ್ಯ.ಮಹಿಳಾ ಸಮಿತಿ ಅಧ್ಯಕ್ಷೆ ಪುಷ್ಪಾವತಿ. ಪವಿತ್ರಪಾಣಿ ಮೋಹನ್ ಕೆರ್ಮುಣ್ಣಾಯ ಮೈರಾರು. ಎಸ್ ಗಂಗಾಧರ ರಾವ್ ಕೆವುಡೇಲು, ಕುವೆಟ್ಟು ಗ್ರಾ.ಪಂ .ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ ಉಪಸ್ಥಿತರಿದ್ದರು
ಸಭೆಯಲ್ಲಿ ವಿವಿಧ ಸಮಿತಿಗಳ ಸಂಚಾಲಕರು ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು.