News Karnataka Kannada
Sunday, May 05 2024
ಮಂಗಳೂರು

ಬೆಳ್ತಂಗಡಿ: ಓಡಿಲ್ನಾಳ ಕಿರಾತಮೂರ್ತಿ ದೇವಸ್ಥಾನದ ಬ್ರಹ್ಮಕಲಶ ಸಮಿತಿ ರಚನೆ, ಸಮಾಲೋಚನ ಸಭೆ

Brahmakalasha Samiti of Kiratamurthy Temple in Odilnala to be formed
Photo Credit : By Author

ಬೆಳ್ತಂಗಡಿ: ತಾಲೂಕಿನ ಓಡಿಲ್ನಾಳ ಗ್ರಾಮದ ಮೈರಲ್ಕೆ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪಧಾದಿಕಾರಿಗಳ ಹಾಗೂ ವಿವಿಧ ಸಮಿತಿಗಳ ಸಂಚಾಲಕರ ಆಯ್ಕೆ ಹಾಗೂ ಪೂರ್ವ ತಯಾರಿ ಸಭೆ ನ. 12ರಂದು ಬೆಳ್ತಂಗಡಿ ಶಾಸಕ ಹಾಗೂ ಬ್ರಹ್ಮ ಕಲಶ ಸಮಿತಿ ಅಧ್ಯಕ್ಷ. ಹರೀಶ್ ಪೂಂಜ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜ,ಡಿಸೆಂಬರ್ ತಿಂಗಳಿನಲ್ಲಿ ನಡೆಯುವ ಕಿರಾತಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಕೆಲಸಗಳು ಭರದಿಂದ ಸಾಗುತ್ತಿದೆ. ಊರವರ ಶ್ರಮದಾನದಿಂದ ಸುಂದರವಾದ ದೇವಾಲಯ ನಿರ್ಮಾಣಗೊಳ್ಳುತ್ತಿದ್ದು,ಮುಂಬರುವ ದಿನಗಳಲ್ಲಿ ಬ್ರಹ್ಮಕಲಶ ನಡೆಯಲಿದೆ. ಅದಕ್ಕೆ ಬೇಕಾದ ಪೂರ್ವ ತಯಾರಿಯನ್ನು ಮಾಡಿಕೊಳ್ಳಬೇಕು.ಬ್ರಹ್ಮಕಲಶ ಯಶಸ್ವಿತಾಗಲು ದೇವಸ್ಥಾನಕ್ಕೆ ಸಂಬಂದಪಟ್ಟ ಗ್ರಾಮದ ಪ್ರತಿ ಮನೆಯವರ ಪಾಲ್ಗೊಳ್ಳುವಿಕೆ ಅಗತ್ಯವಾಗಿದೆ. ಎಲ್ಲರೂ ಒಟ್ಟಾಗಿ ಸೇರಿಕೊಂಡು ದೇವಸ್ಥಾನದ ಬ್ರಹ್ಮಕಲಶೋತ್ಸವ ಯಶಸ್ವಿಗೊಳಿಸೋಣ ಎಂದು ಅವರು ಸಲಹೆ ಸೂಚನೆಗಳನ್ನು ನೀಡಿದರು.

ಕ್ಷೇತ್ರದ ತಂತ್ರಿಗಳಾದ ನಂದ ಕುಮಾರ್ ಅವರ ಉಪಸ್ಥಿತಿಯಲ್ಲಿ ಶಾಸಕ, ಬ್ರಹ್ಮ ಕಲಶ ಸಮಿತಿ ಅಧ್ಯಕ್ಷ ಹರೀಶ್ ಪೂಂಜ, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಜಯರಾಮ ಶೆಟ್ಟಿ ಪಡಂಗಡಿ ಹಾಗೂ ಧರ್ಮೋತ್ಥಾನ ಟ್ರಸ್ಟ್ ಅಧ್ಯಕ್ಷ ವೃಷಭ ಆರಿಗ ಅವರ ನೇತೃತ್ವದಲ್ಲಿ ವಿವಿಧ ಸಮಿತಿಗಳನ್ನು ರಚಿಸಲಾಯಿತು.

ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ ಗೋಪಾಲ ಶೆಟ್ಟಿ ಕೋರ್ಯಾರು. ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಧ್ಯಕ್ಷ ರಾಜ್ ಪ್ರಕಾಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಧರಣೇಂದ್ರ ಕೆ ಜೈನ್, ಯುವ ಸಮಿತಿ ಅಧ್ಯಕ್ಷ ಚಿದಾನಂದ ಇಡ್ಯ.ಮಹಿಳಾ ಸಮಿತಿ ಅಧ್ಯಕ್ಷೆ ಪುಷ್ಪಾವತಿ. ಪವಿತ್ರಪಾಣಿ ಮೋಹನ್ ಕೆರ್ಮುಣ್ಣಾಯ ಮೈರಾರು. ಎಸ್ ಗಂಗಾಧರ ರಾವ್ ಕೆವುಡೇಲು, ಕುವೆಟ್ಟು ಗ್ರಾ.ಪಂ .ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ ಉಪಸ್ಥಿತರಿದ್ದರು

ಸಭೆಯಲ್ಲಿ ವಿವಿಧ ಸಮಿತಿಗಳ ಸಂಚಾಲಕರು ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು