ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ಧರ್ಮಸ್ಥಳ ಹೈಸ್ಕೂಲ್ ಸಮೀಪ ಕಾರು ಹಾಗೂ ಬೈಕ್ ಎದುರು ಬದುರಾಗಿ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಪಟ್ರಮೆ ಗ್ರಾಮದ ನಿವಾಸಿ ಶಿವರಾಂ (30) ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ಬೆಂಗಳೂರಿನ ಹೇಮಂತ್ ಎಂಬವರಿಗೆ ಸೇರಿದ್ದಾಗಿದ್ದು ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದರು. ಘಟನೆಯ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.