News Karnataka Kannada
Monday, April 29 2024
ಮಂಗಳೂರು

ಬೆಳ್ತಂಗಡಿ: ಹೆದ್ದಾರಿಗಳ ತುರ್ತು ದುರಸ್ತಿಗೆ 1ಕೋ ರೂ, ಡಾ.ಹೆಗ್ಗಡೆಯವರ ಮನವಿಗೆ ಸಿಎಂ ಸ್ಪಂದನೆ

Bengaluru: Dr. B.R. Ambedkar was sworn in in the Rajya Sabha today. Virendra Heggade
Photo Credit : By Author

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನ.19ರಿಂದ 24ರ ತನಕ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ನಡೆಯಲಿದೆ. ಈ ಸಂದರ್ಭ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತರು ಆಗಮಿಸಲಿದ್ದು, ಭಕ್ತರ ಅನುಕೂಲಕ್ಕೆ ಧರ್ಮಸ್ಥಳಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಸರಿಪಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜ್ಯಸಭಾ ಸದಸ್ಯ, ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಪತ್ರ ಮುಖೇನ ಮನವಿ ಮಾಡಿದ್ದಾರೆ.

ಧರ್ಮಸ್ಥಳಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 73 ಗುರುವಾಯನಕೆರೆಯಿಂದ ಉಜಿರೆ ತನಕದ ರಸ್ತೆ ಹಾಗೂ ಕೇಂದ್ರ ಸರ್ಕಾರದಿಂದ ಸ್ಪರ್ ರಸ್ತೆಯಾಗಿ ಘೋಷಣೆಯಾಗಿರುವ ಪೆರಿಯಶಾಂತಿಯಿಂದ ಧರ್ಮಸ್ಥಳವರೆಗಿನ ರಸ್ತೆ ತೀರಾ ಹದಗೆಟ್ಟಿದ್ದು, ಇದರಲ್ಲಿ ವಾಹನ ಸಂಚಾರ ಕಷ್ಟವಾಗಿದೆ. ಈ ರಸ್ತೆ ಸರಿಪಡಿಸಲು ಒಂದು ಕೋಟಿ ರೂ. ರಾಷ್ಟ್ರೀಯ ಹೆದ್ದಾರಿಯ ಮಂಗಳೂರು ವಿಭಾಗಕ್ಕೆ ಬಿಡುಗಡೆ ಮಾಡುವಂತೆ ವಿನಂತಿ ಮಾಡಿದ್ದಾರೆ. ಇದಕ್ಕೆ ಸ್ಪಂದಿಸಿರುವ ಸಿಎಂ, 1 ಕೋಟಿ ರೂಪಾಯಿ ಮಂಜೂರು ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು