ಬೆಳ್ತಂಗಡಿ: ಅಭಿವೃದ್ಧಿ ಹೆಸರಿನಲ್ಲಿ ಪ್ರತಿಯೊಂದು ಕಾಮಗಾರಿಗಳಲ್ಲೂ ಭ್ರಷ್ಟಾಚಾರ ನಡೆದಿದೆ. ತಾಲೂಕಿನಲ್ಲಿ ಮಿತಿ ಮೀರಿ ಮಾಫಿಯಾ, ಅಕ್ರಮ ಮರಳು ಗಣಿಗಾರಿಕೆಯಿಂದ ರಾಜ್ಯದಲ್ಲೇ ಕೆಟ್ಟ ಹೆಸರು ಪಡೆದಿದೆ. ನೇತ್ರಾವತಿಯ ಒಡಲನ್ನೇ ಬಗೆಯುತ್ತಿರುವುದರಿಂದ ತಾಲೂಕಿನಲ್ಲಿ ಕುಡಿಯುವ ನೀರಿಗೂ ಅಭಾವ ಬಂದಿರುವುದಕ್ಕೆ ಅಕ್ರಮ ಮರಳುಗಣಿಗಾರಿಕೆಯೇ ಕಾರಣ ಎಂದು ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಹೇಳಿದರು.
ಬೆಳ್ತಂಗಡಿ ವಿಧಾನಸಭ ‘ ಕ್ಷೇತ್ರದ ಬಪಾಡಿ, ಪದ್ಮಂಜ, ಬಾರ್ಯ, ತೆಕ್ಕಾರು, ಇಳಂತಿಲ ಮತ್ತು ಕರಾಯ ಸೇರಿದಂತೆ ಹಲವು ಕಡೆ ಮಾಜಿ ಶಾಸಕ ಕೆ.ವಸಂತ ಬಂಗೇರ ಅವರೊಂದಿಗೆ ಪ್ರಚಾರ ಕಾರ್ಯದಲ್ಲಿ ‘ಭಾಗವಹಿಸಿ ಮಾತನಾಡಿದರು.
ಈ ಬಾರಿ ಇಂತಹ ಅಕ್ರಮಗಳಿಗೆ ಕಡಿವಾಣ ಹಾಕಬೇಕಾದರೆ ಕಾಂಗ್ರೆಸ್ ಪಕ್ಷವನ್ನ ಗೆಲ್ಲಿಸಿ. ತಾಲೂಕಿನ ಅಭಿವೃದ್ಧಿಯಲ್ಲಿ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ, ಸ್ವಜನಪಕ್ಷಪಾತಕ್ಕೆ ಒಳಗಾಗುವುದಿಲ್ಲ ಎಂದು ಭರವಸೆ ನೀಡಿದರು.
ಮಾಜಿ ಶಾಸಕ ಕೆ.ವಸಂತ ಬಂಗೇರ ಮಾತನಾಡಿ, ಬೆಳ್ತಂಗಡಿಯ ಶಾಸಕರಿಗೆ ಅಭಿವೃದ್ಧಿ ವಿಚಾರ ತಲೆಯಲ್ಲಿ ಬಡವರಿಗೆ ನೀಡುವ ಅಕ್ರಮ-ಸಕ್ರಮದ ಹಕ್ಕುಪತ್ರದಲ್ಲೂ ಮಧ್ಯವರ್ತಿಗಳಿಂದ ವಸೂಲಿ ಮಾಡಿದ್ದಾರೆ. ಈ ಬಾರಿ ಇಂತಹ ಕಮಿಷನ್ ಶಾಸಕರನ್ನು ಸೋಲಿಸಬೇಕೆಂದು ಹೇಳಿದರು.
ಪ್ರಚಾರ ಸಭೆಯಲ್ಲಿ ರಕ್ಷಿತ್ ಶಿವರಾಂ ಪರ ಕ್ಷೇತ್ರ ಕುದ್ರೋಳಿ ಕೋಶಾಧಿಕಾರಿ ಹಾಗೂ ಕೆಪಿಸಿಸಿ ಪ್ರ‘ಧಾನ ಕಾರ್ಯದರ್ಶಿ ಪದ್ಮರಾಜ್ ಮತಯಾಚಿಸಿ, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬರುವುದು ನಿಶ್ಚಿತ. ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳು, ಐದು ಗ್ಯಾರೆಂಟಿಗಳ ಜನ ಸಾಮಾನ್ಯರ ಪರವಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿ.ಪಂ. ಮಾಜಿ ಸದಸ್ಯರಾದ ಶಾಹಲ್ ಹಮೀದ್, ಪಕ್ಷದ ಪ್ರಮುಖರಾದ ಜಯವಿಕ್ರಮ್, ಹರೀಶ್ ಗೌಡ, ಉಮವಾತಿ ಗೌಡ, ಅಬ್ದುಲ್ ರಝಕ್ ತೆಕ್ಕಾರು, ಅಯುಬ್ ಡಿ.ಕೆ., ಈಶ್ವರ ಭಟ್ ಮಾಯ್ತಿಲೋಡಿ, ಉಷಾ ಶರತ್, ಮನೋಹರ್ ಇಳಂತಿಲ ಹಾಗೂ ಪ್ರಮುಖರು ಉಪಸ್ಥಿತರಿದ್ದರು.