News Karnataka Kannada
Wednesday, May 08 2024
ಮಂಗಳೂರು

ಬೆಳ್ತಂಗಡಿ: ಉಜಿರೆ ಶ್ರೀ ರತ್ನವರ್ಮಹೆಗ್ಗಡೆ ಕ್ರೀಡಾಂಗಣದಲ್ಲಿ ದಸರಾ ಕ್ರೀಡಾಕೂಟ

Belthangady: Dasara Games to be held at Ujire Sri Ratnavarmaheggade Stadium
Photo Credit : By Author

ಬೆಳ್ತಂಗಡಿ: ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಉಜಿರೆಯ ಶ್ರೀ ರತ್ನವರ್ಮಹೆಗ್ಗಡೆ ಕ್ರೀಡಾಂಗಣದಲ್ಲಿ ಶನಿವಾರ ನಡೆಯಿತು.

ಕ್ರೀಡಾಕೂಟದ ಉದ್ಘಾಟನೆಯನ್ನು ಉಜಿರೆ ಗ್ರಾಮ ಪಂಚಾಯತು ಅಧ್ಯಕ್ಷೆ ಪುಷ್ಪಾವತಿ ಆರ್ ಶೆಟ್ಟಿ ಅವರು ನೆರವೇರಿಸಿ ಮಾತನಾಡುತ್ತಾ ಕ್ರೀಡಾ ಮನೋಭಾವನೆಯೊಂದಿಗೆ ಕ್ರೀಡಾಕೂಟದಲ್ಲಿ ಭಾಗವಹಿಸುವಂತೆ ಸಲಹೆ ನೀಡಿದರು. ಕ್ರೀಡೆಯಲ್ಲಿ ಸೋಲು ಗೆಲವು ಮುಖ್ಯವಲ್ಲಿ ಎಲ್ಲರೂ ಗೆಲುವನ್ನು ಪಡೆಯಲು ಸಾಧ್ಯವಿಲ್ಲ ಬಗವಹಿಸುವಿಕೆಯೇ ಮುಖ್ಯವಾಗಿದೆ ಎಂದರು.
ಬೆಳ್ತಂಗಡಿ ತಾಲೂಕು ಪಂಚಾಯತು ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್ ಮುಖ್ಯ ಅತಿಥಿಯಾಗಿ ಆಗಮಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ ಕ್ರೀಡಾ ಕ್ಲಬ್ ಕಾರ್ಯದರ್ಶಿ ರಮೇಶ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣಾನಂದ, ನಿಸರ್ಗ ಯುವಜನೇತರ ಮಂಡಲ ಬರಂಗಾಯ ಅಧ್ಯಕ್ಷ ಪುನೀತ್ ಪೊಂರ್ದಿಲ ಹಾಗೂ ಇತರರು ಇದ್ದರು.
ಯುವಜನ ಸಬಲೀಕರಣ ಇಲಾಖೆಯ ಮೇಲ್ವಿಚಾರಕ ಸಾಂತಪ್ಪ ಸ್ವಾಗತಿಸಿದರು, ಅಜಿತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು, ತರಬೇತುದಾರರಾದ ಸರಸ್ವತಿ ಪುತ್ರನ್ ವಂದಿಸಿದರು. ಕ್ರೀಡಾಕೂಟದಲ್ಲಿ ತಾಲೂಕಿನ ವಿವಿಧ ಭಾಗಗಳಿಂದ ಕ್ರೀಡಾಪಟುಗಳು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು