ಬೆಳ್ತಂಗಡಿ: ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಉಜಿರೆಯ ಶ್ರೀ ರತ್ನವರ್ಮಹೆಗ್ಗಡೆ ಕ್ರೀಡಾಂಗಣದಲ್ಲಿ ಶನಿವಾರ ನಡೆಯಿತು.
ಕ್ರೀಡಾಕೂಟದ ಉದ್ಘಾಟನೆಯನ್ನು ಉಜಿರೆ ಗ್ರಾಮ ಪಂಚಾಯತು ಅಧ್ಯಕ್ಷೆ ಪುಷ್ಪಾವತಿ ಆರ್ ಶೆಟ್ಟಿ ಅವರು ನೆರವೇರಿಸಿ ಮಾತನಾಡುತ್ತಾ ಕ್ರೀಡಾ ಮನೋಭಾವನೆಯೊಂದಿಗೆ ಕ್ರೀಡಾಕೂಟದಲ್ಲಿ ಭಾಗವಹಿಸುವಂತೆ ಸಲಹೆ ನೀಡಿದರು. ಕ್ರೀಡೆಯಲ್ಲಿ ಸೋಲು ಗೆಲವು ಮುಖ್ಯವಲ್ಲಿ ಎಲ್ಲರೂ ಗೆಲುವನ್ನು ಪಡೆಯಲು ಸಾಧ್ಯವಿಲ್ಲ ಬಗವಹಿಸುವಿಕೆಯೇ ಮುಖ್ಯವಾಗಿದೆ ಎಂದರು.
ಬೆಳ್ತಂಗಡಿ ತಾಲೂಕು ಪಂಚಾಯತು ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್ ಮುಖ್ಯ ಅತಿಥಿಯಾಗಿ ಆಗಮಿಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಎಸ್.ಡಿ.ಎಂ ಕ್ರೀಡಾ ಕ್ಲಬ್ ಕಾರ್ಯದರ್ಶಿ ರಮೇಶ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣಾನಂದ, ನಿಸರ್ಗ ಯುವಜನೇತರ ಮಂಡಲ ಬರಂಗಾಯ ಅಧ್ಯಕ್ಷ ಪುನೀತ್ ಪೊಂರ್ದಿಲ ಹಾಗೂ ಇತರರು ಇದ್ದರು.
ಯುವಜನ ಸಬಲೀಕರಣ ಇಲಾಖೆಯ ಮೇಲ್ವಿಚಾರಕ ಸಾಂತಪ್ಪ ಸ್ವಾಗತಿಸಿದರು, ಅಜಿತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು, ತರಬೇತುದಾರರಾದ ಸರಸ್ವತಿ ಪುತ್ರನ್ ವಂದಿಸಿದರು. ಕ್ರೀಡಾಕೂಟದಲ್ಲಿ ತಾಲೂಕಿನ ವಿವಿಧ ಭಾಗಗಳಿಂದ ಕ್ರೀಡಾಪಟುಗಳು ಭಾಗವಹಿಸಿದ್ದರು.