ಬೆಳ್ತಂಗಡಿ: ರಾಜ್ಯಸಭಾ ಸದಸ್ಯ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಕೇಂದ್ರದ ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಜಾರ್ಖಂಡ್ ರಾಜ್ಯದ ಪ್ರಸಿದ್ಧ ಜೈನ ಕ್ಷೇತ್ರವಾದ ಸಮ್ಮೇದ ಶಿಖರ್ಜಿಯನ್ನು ಪ್ರವಾಸಿ ಕೇಂದ್ರವೆಂದು ಅಲ್ಲಿನ ರಾಜ್ಯಸರ್ಕಾರವು ಪರಿಗಣಿಸಿರುವುದನ್ನು ಕೈಬಿಡಬೇಕೆಂದು ಒತ್ತಾಯಿಸಿದರು.
ಇದಕ್ಕೆ ಸ್ಪಂದಿಸಿದ ಸಚಿವರು, ನಾನು ಈಗಾಗಲೇ ಲೋಕ ಸಭೆಯಲ್ಲಿ ಈ ಬಗ್ಗೆ ಹೇಳಿಕೆ ನೀಡಿರುವುದಾಗಿ ಮತ್ತು ತಮ್ಮ ಕೋರಿಕೆಯ ಮೇರೆಗೆ ತಕ್ಷಣ ಜಾರ್ಖಂಡ್ನ ಮುಖ್ಯಮಂತ್ರಿಯವರಿಗೆ ಮತ್ತೊಂದು ಪತ್ರವನ್ನು ಬರೆದು ಸಮ್ಮೇದ ಶಿಖರ್ಜಿಯ ಪಾವಿತ್ರ್ಯತೆಯನ್ನು ಉಳಿಸುವಂತೆ ಮತ್ತು ಪ್ರವಾಸಿ ತಾಣ ಎಂಬುದನ್ನು ಕೈಬಿಡಬೇಕೆಂದು ಒತ್ತಾಯಿಸುತ್ತೇನೆ ಎಂದು ತಿಳಿಸಿದರು.