News Karnataka Kannada
Monday, April 29 2024
ಮಂಗಳೂರು

ಎ.ಜಿ. ಕೊಡ್ಗಿ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ

Untitled 1
Photo Credit :

ಬೆಳ್ತಂಗಡಿ: ಮಾಜಿ ಶಾಸಕ ಎ.ಜಿ. ಕೊಡ್ಗಿ ಅವರ ನಿಧನಕ್ಕೆ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮೂರನೆ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರಾಗಿ, ಶಾಸಕರಾಗಿ, ಅಮಾಸೆಬೈಲು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾಗಿ ಗ್ರಾಮೀಣ ಪ್ರದೇಶದ ಸರ್ವತೋಮುಖ ಪ್ರಗತಿಗೆ ಅವರು ವಿಶೇಷವಾಗಿ ಶ್ರಮಿಸಿದ್ದಾರೆ. ಅಮಾಸೆಬೈಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರತಿ ಮನೆಗೂ ಸೋಲಾರ್ ದೀಪ ಅಳವಡಿಕೆ, ರಸ್ತೆಗಳ ಅಭಿವೃದ್ಧಿ, ಕೃಷಿಯಲ್ಲಿ ಪ್ರಗತಿಯೊಂದಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಗ್ರಾಮದ ಪ್ರಗತಿಗೆ ಅವರು ಪೂರ್ಣ ಸಹಕಾರ ನೀಡಿ ಪ್ರೋತ್ಸಾಹಿಸಿದ್ದಾರೆ.

ಅವರ ದೇಶಪ್ರೇಮ, ಸಮಾಜಮುಖಿ ಚಿಂತನೆಗಳು, ರಾಜಕೀಯವಾಗಿ ಅವರು ತಳೆದ ದೃಢ ನಿಲುವುಗಳು ಪ್ರಶಂಸನೀಯವಾಗಿವೆ. ಹಿರಿಯ ನಾಗರಿಕರಾಗಿಯೂ, ನಮ್ಮ ಕ್ಷೇತ್ರದ ಅಭಿಮಾನಿ ಭಕ್ತರಾಗಿಯೂ ನನಗೆ ಅವರು ಹಲವು ವರ್ಷಗಳಿಂದ ಚಿರಪರಿಚಿತರು ಹಾಗೂ ಆತ್ಮೀಯರಾಗಿದ್ದಾರೆ. ಅವರ ಅನೇಕ ಕಾರ್ಯಕ್ರಮಗಳಿಗೆ ನಮ್ಮ ಕ್ಷೇತ್ರದ ವತಿಯಿಂದ ನೆರವು ನೀಡಿ ಪ್ರೋತ್ಸಾಹಿಸಿದ್ದೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಅವರು ಪ್ರಾರ್ಥಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು