ಬೆಳ್ತಂಗಡಿ: ಆದರ್ಶ ಸೇವಾ ಸಮಿತಿ ರಾಮನಗರ ಉಜಿರೆ, ವಿಶ್ವ ಹಿಂ ದು ಪರಿಷತ್ ಮತ್ತು ಬಜರಂಗದಳ ಕಳೆಂಜ-ಕಾಯರ್ತಡ್ಕ, ಬೆಳ್ತಂಗಡಿ ರೋಟರಿ ಕ್ಲಬ್ ಮತ್ತು ರೋಟರಿ ಸೇವಾ ಟ್ರಸ್ಟ್ (ರಿ). ಮತ್ತು ಶ್ರೀ ಉಮಾಮಹೇಶ್ವರ ದೇವಸ್ಥಾನ ಕಳೆಂಜ- ಕಾಯರ್ತಡ್ಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ಯೆನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಸಹಕಾರದೊಂದಿಗೆ ಕಳೆಂಜ- ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದ ಸಭಾಭವನದಲ್ಲಿ ಡಿ.13ರಂದು ಮಂಗಳವಾರ ಬೆಳಿಗ್ಗೆ 9.30 ರಿಂದ ಮದ್ಯಾಹ್ನ 1 ರ ವರೆಗೆ ಉಚಿತ ನೇತ್ರ ಪರೀಕ್ಷೆ ಹಾಗೂ ಚಿಕಿತ್ಸೆ ಶಿಬಿರ ನಡೆಯಲಿದೆ.
ಶಿಬಿರದಲ್ಲಿ ನೇತ್ರತಜ್ಞರಿಂದ ಕಣ್ಣಿನ ಪರೀಕ್ಷೆ, ಚಿಕಿತ್ಸೆ ಮತ್ತು ಸಲಹೆ ಉಚಿತವಾಗಿ ನೀಡಲಾಗುವುದು. ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಆಯ್ಕೆಯಾದವರಿಗೆ ಮಂಗಳೂರು ದೇರಳಕಟ್ಟೆ ಯೆನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಉಚಿತವಾಗಿ ಶಸ್ತ್ರ ಚಿಕಿತ್ಸೆ ಮಾಡಲಾಗುವುದು. ಕನ್ನಡಕದ ಅವಶ್ಯಕತೆಯಿದ್ದವರಿಗೆ ರಿಯಾಯತಿ ದರದಲ್ಲಿ ಕನ್ನಡಕ ವಿತರಿಸಲಾಗುವುದು. ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆಯುವಂತೆ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.