ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ ಮತ್ತು ಉಜಿರೆಯ ಶ್ರೀ ಧ .ಮಂ. ಪದವಿಪೂರ್ವ ಕಾಲೇಜು ಜಂಟಿ ಸಹಭಾಗಿತ್ವದಲ್ಲಿ ಜಿಲ್ಲಾ ಮಟ್ಟದ ಶೈಕ್ಷಣಿಕ ಸಮಾವೇಶ 2022-23 ವನ್ನು ಉಜಿರೆ ಶ್ರೀ ಸಿದ್ದವನ ಗುರುಕುಲದಲ್ಲಿ ಸೆ. 16 ರಂದು ಬೆಳಿಗ್ಗೆ 9.45 ಕ್ಕೆ ರಾಜ್ಯಸಭಾ ಸದಸ್ಯ,ಧರ್ಮಾಧಿಕಾರಿ , ಎಸ.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ! ಡಿ. ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಲಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗು ಸಕಾಲ ಇಲಾಖಾ ಸಚಿವ ಬಿ.ಸಿ.ನಾಗೇಶ್ ಸೇವಾ ನಿವೃತ್ತ ಪ್ರಾಚಾರ್ಯರನ್ನು ಸನ್ಮಾನಿಸಲಿರುವರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಲಿದ್ದು ,ಮುಖ್ಯ ಅತಿಥಿಗಳಾಗಿ ಮೂಡಬಿದ್ರಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ! ಮೋಹನ ಆಳ್ವ ,ಜಿಲ್ಲಾ ಪ. ಪೂ .ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಡಿ .ಜಯಣ್ಣ ಮತ್ತು ಉಜಿರೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ! ಎಸ್ .ಸತೀಶ್ಚಂದ್ರ ಭಾಗವಹಿಸಲಿದ್ದಾರೆ.
ಸಮಾವೇಶದಲ್ಲಿ ನವವಿನ್ಯಾಸದ ಸುವಿದ್ಯಾ ತಂತ್ರಾಂಶದ ಬಿಡುಗಡೆ,ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವಧನ ನೀಡಿ ಗೌರವಿಸುವುದು,ಯೂ ಟ್ಯೂಬ್ ತರಗತಿಗಳನ್ನು ನಡೆಸಿದ ಪ್ರಾಚಾರ್ಯರು,ಉಪನ್ಯಾಸಕರ ಸನ್ಮಾನ, ಕೋವಿಡ್ ಗೆ ತುತ್ತಾಗಿ ಸಾವನ್ನಪ್ಪಿದ ಯೂ ಟ್ಯೂಬ್ ತರಗತಿಗಳನ್ನು ನಡೆಸಿದ ಉಪನ್ಯಾಸಕರ ಕುಟುಂಬಕ್ಕೆ ಸ ಹಾಯಧನ ವಿತರಣೆ ಮೊದಲಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.