ಮಂಗಳೂರು

ಬೆಳ್ತಂಗಡಿ: ಆರೋಗ್ಯ ವಿಮಾ ಸೌಲಭ್ಯದ ಬಗ್ಗೆ ತಿಳುವಳಿಕೆ ಅನಿವಾರ್ಯ- ಡಿ. ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ ಮತ್ತು ಮಾರ್ಗದರ್ಶನದಲ್ಲಿ ಆರೋಗ್ಯ, ಶಿಕ್ಷಣ, ಧಾರ್ಮಿಕ, ಕೃಷಿ, ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಆರ್ಥಿಕ ಸಬಲೀಕರಣಕ್ಕಾಗಿ ಮಾಡುತ್ತಿರುವ ಸೇವೆ ಆದರ್ಶ ಹಾಗೂ ಅನುಕರಣೀಯವಾಗಿದೆ ಎಂದು ಕೊಲ್ಕತ್ತಾದ ನೇಶನಲ್ ಇನ್ಸೂರೆನ್ಸ್ ಕಂಪೆನಿಯ ಅದ್ಯಕ್ಷರು ಮತ್ತು ಆಡಳಿತ ನಿರ್ದೇಶಕಿ ಸುಚಿತಾ ಗುಪ್ತ ಹೇಳಿದರು.

ಅವರು ಗುರುವಾರ ಧರ್ಮಸ್ಥಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಆರೋಗ್ಯ ವಿಮೆಯ ಗಂಭೀರ ಅನಾರೋಗ್ಯ ನಿಧಿ ವಿತರಿಸಿ ಮಾತನಾಡಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾನವೀಯತೆಯಿಂದ ಮಾಡುತ್ತಿರುವ ಬಹುಮುಖಿ ಸಮಾಜಸೇವೆ ಹಾಗೂ ಧರ್ಮಸ್ಥಳದ ಭವ್ಯ ಇತಿಹಾಸ, ಹಿನ್ನೆಲೆ ಹಾಗೂ ಪರಂಪರೆ ಬಗ್ಗೆ ತಾನು ಕೇಳಿದ್ದರೂ ಸಮಾರಂಭದ ಮೂಲಕ ಹೆಚ್ಚಿನ ಮಾಹಿತಿ ಪಡೆಯಲು ಸಾಧ್ಯವಾಯಿತು ಎಂದರು.

ನೇಶನಲ್ ಇನ್ಸೂರೆನ್ಸ್ ಕಂಪೆನಿಯಿಂದ ಆರೋಗ್ಯ ವಿಮೆಗೆ ಪೂರ್ಣ ಸಹಕಾರ ಮತ್ತು ಬೆಂಬಲ ನೀಡುವುದಾಗಿ ಅವರು ಭರವಸೆ ನೀಡಿದರು. ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡ ಹೆಗ್ಗಡೆಯವರನ್ನು ಅವರು ಅಭಿನಂದಿಸಿ ಶುಭ ಹಾರೈಸಿದರು.

ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಪ್ರತಿಯೊಬ್ಬರೂ ಆರೋಗ್ಯ ವಿಮೆ ಮಾಡಿಸಬೇಕು. ವಿಮಾ ಸೌಲಭ್ಯದ ಬಗ್ಗೆ ಸವಿವರ ಮಾಹಿತಿ, ತಿಳುವಳಿಕೆ ಎಲ್ಲರಿಗೂ ಇಂದು ಅನಿವಾರ್ಯವಾಗಿದೆ. ಅನಿರೀಕ್ಷಿತ ಆಪತ್ತು ಬಂದಾಗ, ಆರೋಗ್ಯದಲ್ಲಿ ವ್ಯತ್ಯಾಯವಾದಾಗ ವಿಮೆ ನಮಗೆ ರಕ್ಷಣೆ ಮತ್ತು ಭರವಸೆಯನ್ನು ನೀಡುತ್ತದೆ. ಆಧುನಿಕ ವೈದ್ಯಕೀಯ ಸವಲತ್ತುಗಳ ಸದುಪಯೋಗ ಪಡೆದು, ವಿಮೆ ಮಾಡುವುದರ ಮೂಲಕ ನಮ್ಮನ್ನು ರಕ್ಷಣೆ, ಮಾಡಿಕೊಳ್ಳಬಹುದು. ವಿಮೆಯ ವ್ಯವಹಾರದಲ್ಲಿ ಲಾಭ ಮುಖ್ಯ ಅಲ್ಲ ಸೇವಾ ಮನೋಭಾವವೇ ಮುಖ್ಯವಾಗಿದೆ.

ಮಳೆ ಹಾಗೂ ಬಿಸಿಲಿನಿಂದ ಕೊಡೆ ನಮಗೆ ರಕ್ಷಣೆ ನೀಡುವಂತೆ ವಿಮೆ ಕೂಡಾ ಆಪತ್ತು ಬಂದಾಗ, ಅನಾರೋಗ್ಯ ಪೀಡಿತರಾದಾಗ ರಕ್ಷಣೆ ನೀಡುತ್ತದೆ. ಆದುದರಿಂದ ಸಂಕೋಚವಿಲ್ಲದೆ ಪ್ರತಿಯೊಬ್ಬರೂ ಆರೋಗ್ಯ ವಿಮೆ ಮಾಡಿಸಬೇಕು ಎಂದು ಅವರು ಸಲಹೆ ನೀಡಿದರು.

ಕೊರೊನಾ ಸಂದರ್ಭದಲ್ಲಿ ನಾಲ್ಕು ಆಸ್ಪತ್ರೆಗಳಿಗೆ ಸಿ.ಟಿ. ಸ್ಕ್ಯಾನ್ ಮೆಶಿನ್ ನೀಡಿದ್ದು, ಈ ವರ್ಷ ಇನ್ನೂ ಮೂರು ಆಸ್ಪತ್ರೆಗಳಿಗೆ ಸಿ.ಟಿ. ಸ್ಕ್ಯಾನ್ ಮೆಶಿನ್ ನೀಡಲಾಗುವುದು.

ಆರೋಗ್ಯ ವಿಮೆ ಮಾಡಿಸಿದವರಿಗೆ ಉಜಿರೆಯಲ್ಲಿ ಮತ್ತು ಧಾರವಾಡದಲ್ಲಿ ಇರುವ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಹೊರರೋಗಿ ವಿಭಾಗದಲ್ಲಿ ಎಲ್ಲಾ ಸೇವೆಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಹೆಗ್ಗಡೆಯವರು ಪ್ರಕಟಿಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯದಲ್ಲಿ 461 ಆಸ್ಪತ್ರೆಗಳಲ್ಲಿ ಆರೋಗ್ಯ ವಿಮೆ ಮಾಡಿಸಿದವರಿಗೆ ಚಿಕಿತ್ಸೆ ಪಡೆಯಲು ಅವಕಾಶವಿದ್ದು 33 ಜಿಲ್ಲೆಗಳಲ್ಲಿ ಆರೋಗ್ಯ ವಿಮೆ ಈಗಾಗಲೆ ಜಾರಿಯಲ್ಲಿದೆ. ಎರಡೂವರೆ ಕೋಟಿ ರೂ. ಮೊತ್ತವನ್ನು ಗಂಭೀರ ಅನಾರೋಗ್ಯ ನಿಧಿಗಾಗಿ ಮೀಸಲಿಡಲಾಗಿದೆ. ಸಂಪೂರ್ಣ ಸುರಕ್ಷಾ ವಿಮೆಗೆ 8,74,130 ಮಂದಿ ಹಾಗೂ ಆರೋಗ್ಯ ವಿಮೆಗೆ 49,25,377 ಮಂದಿ ಸೇರಿದಂತೆ ಒಟ್ಟು 57,99,507 ಮಂದಿ ಸದಸ್ಯರು ಈಗಾಗಲೆ ನೋಂದಾವಣೆ ಮಾಡಿದ್ದಾರೆ ಎಂದು ಅವರು ತಿಳಿಸಿದರು.

ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪೆನಿ, ನೇಶನಲ್ ಇನ್ಸೂರೆನ್ಸ್ ಕಂಪೆನಿ, ಓರಿಯಂಟಲ್ ಇನ್ಸೂರೆನ್ಸ್ ಕಂಪೆನಿ ಮತ್ತು ಯೂನಿವರ್ಸಲ್ ಸ್ಯಾಂಪೊ ಇನ್ಸೂರೆನ್ಸ್ ಕಂಪೆನಿ ಎಂಬ ನಾಲ್ಕು ವಿಮಾ ಕಂಪೆಗಳು ಆರೋಗ್ಯ ವಿಮಗೆ ಸಹಯೋಗ ನೀಡಲಿವೆ ಎಂದು ಅವರು ತಿಳಿಸಿದರು.

ನೇಶನಲ್ ಇನ್ಸೂರೆನ್ಸ್ ಕಂಪೆನಿಯ ಮಹಾಪ್ರಬಂಧಕ ಪೀಟರ್ ಚಿತ್ತರಂಜನ್, ಡಿ.ಜಿ.ಎಂ. ಕೇಶವ ಮೋಹನ್ ಮತ್ತು ಮಂಗಳೂರು ವಿಭಾಗದ ಹಿರಿಯ ವಿಭಾಗೀಯ ಪ್ರಬಂಧಕಿ ಪುಷ್ಪಲತಾ, ಕೆ.ಪಿ. ಉಪಸ್ಥಿತರಿದ್ದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ಸ್ವಾಗತಿಸಿದರು. ವಿಮಾ ವಿಭಾಗದ ಪ್ರಾದೇಶಿಕ ನಿರ್ದೇಶಕ ಪುರುಶೋತ್ತಮ ಪಿ.ಕೆ. ಧನ್ಯವಾದವಿತ್ತರು.

Gayathri SG

Recent Posts

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

30 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

55 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago