Categories: ಮಂಗಳೂರು

ಬೆಳ್ತಂಗಡಿ: ಅಂತಾರಾಷ್ಟ್ರೀಯ ಸ್ಕೌಟ್ಸ್ ಗೈಡ್ಸ್ ಸಾಂಸ್ಕೃತಿಕ ಜಾಂಬೂರಿ ಪೂರ್ವಭಾವಿ ಸಮಾಲೋಚನಾ ಸಭೆ

ಬೆಳ್ತಂಗಡಿ: ರಾಷ್ಟ್ರ ಮಟ್ಟದಲ್ಲಿ 17 ಜಾಂಬೂರಿ ನಡೆದಿವೆ, ರಾಜ್ಯದಲ್ಲಿ 3, ಜಗತ್ತಿನಲ್ಲಿ 23 ಜಾಂಬೂರಿಗಳಾಗಿವೆ. ಡಿ.21 ರಿಂದ 28 ರವರೆಗೆ ಅಂತಾರಾಷ್ಟ್ರೀಯ ಜಾಂಬೂರಿ ನಡೆಯಲಿದೆ.

ಜಿಲ್ಲೆಗೆ 100 ವರ್ಷ ಸಂದಿರುವ ನೆಲೆಯಲ್ಲಿ ನನಗೆ ಜವಾಬ್ದಾರಿ ನೀಡಿದ್ದಾರೆ ಎಂದು ಮೂಡುಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತರಾದ ಡಾ.ಮೋಹನ್ ಆಳ್ವ ಹೇಳಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಮಡಂತ್ಯಾರ್ ನ ಜಂಟಿ ಆಶ್ರಯದಲ್ಲಿ ಮೂಡಬಿದ್ರೆಯಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಸ್ಕೌಟ್ ಗೈಡ್ ಜಾಂಬೂರಿಯ ಪ್ರಯುಕ್ತ ಅ.21 ರಂದು ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆದ ಸಮಾಲೋಚನ ಸಭೆಯಲ್ಲಿ ಮಾತನಾಡಿದರು.

ಜಂಬೂರಿ ಜತೆ ಐದು ಮೇಳದ ಆಂದೋಲನ
1) ಕೃಷಿ ಮೇಳ:
2) ವಿಜ್ಞಾನ ಮೇಳ:
3) ಆಹಾರೋತ್ಸವ:
4) ಕಲಾಮೇಳ:
5) ಪುಸ್ತಕ ಮೇಳ: ಜತೆಗೆ

ಸೃಜನಶೀಲತೆಗಾಗಿ ಅಭಿನಯ, ಸಂಗೀತ, ಕ್ಲೇ ಮಾಡೆಲೆಂಗ್ ಸೇರಿ ನೂರು ಎಕ್ರೆ ಸ್ಥಳದಲ್ಲಿ ಜೀವನ ಉಲ್ಲಾಸ ಸೃಷ್ಟಿ ಮಾಡಲಿದ್ದೇವೆ. ಉದ್ಘಾಟನೆ, ಸಮಾರೋಪ ಸಮಾರಂಭ, ಮ್ಯಾರಥಾನ್, ಪಥಸಂಚಲನವಿರಲಿದೆ. ಒಟ್ಟು 30 ರಿಂದ 35 ಕೋ.ರೂ. ಖರ್ಚಾಗಲಿದೆ ಎಂದು ಹೇಳಿದರು.

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯ ಎಲ್ಲರಿಗೂ ಹೆಮ್ಮೆ ತರುವ ವಿಚಾರ. ಆರ್ಥಿಕವಾಗಿ ಹಿಂದುಳಿದಿದ್ದರೂ ವಸ್ತು ರೂಪದಲ್ಲಿ ಇತರ ತಾಲೂಕಿಗಳಿಂದ ಅತೀ ಹೆಚ್ಚು ಹೊರೆಕಾಣಿಕೆ ಒದಗಿಸುವ ಭರವಸೆ ನಮಗಿದೆ. ತಾಲೂಕಿನಲ್ಲಿ 45 ಸಾವಿರ ವಿದ್ಯಾರ್ಥಿಗಳಿದ್ದಾರೆ. ಸಂಘ ಸಂಸ್ಥೆ, ಖಾಸಗಿ ಶಿಕ್ಷಣ ಸಂಸ್ಥೆಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಮ್ಮುಖದಲ್ಲಿ ಮತ್ತೊಮ್ಮೆ ಸಭೆ ಸೇರಿ ಯಾವ ರೂಪದಲ್ಲಿ ನೆರವಾಗಬಹುದೆಂದು ಚರ್ಚಿಸಲಾಗುವುದು ಎಂದು ಹೇಳಿದರು. ತಾಲೂಕಿನ‌ ಸ್ಕೌಟ್ಸ್ ಕಟ್ಟಡ ನಿರ್ಮಾಣಕ್ಕೂ 3 ಕೋ.ರೂ. ಇರಿಸಲಾಗಿದೆ.

ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಸ್.ವಿರೂಪಾಕ್ಷಪ್ಪ, ಪ.ಪಂ. ಉಪಾಧ್ಯಕ್ಷ ಜಯಾನಂದ ಗೌಡ, ತಾ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್ ಬಿ., ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಅಧ್ಯಕ್ಷ ವಿಠಲ್ ಶೆಟ್ಟಿ, ರಾಜ್ಯ ಸಂಘಟನಾ ಮುಖ್ಯ ಆಯುಕ್ತ ಪ್ರಭಾಕರ್ ಭಟ್ ಉಪಸ್ಥಿತರಿದ್ದರು.

ಮಡಂತ್ಯಾರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಜತೆ ಕಾರ್ಯದರ್ಶಿ ಧರಣೇಂದ್ರ ಕೆ. ಪ್ರಸ್ತಾವಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಡಂತ್ಯಾರು ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಶಾಂತರಾಮ್ ಪ್ರಭು ಸ್ವಾಗತಿಸಿದರು.

ಸ್ಕೌಟ್ಸ್ ಲೀಡರ್ ಬೆಳಿಯಪ್ಪ ನಿರೂಪಿಸಿದರು.ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೆಳ್ತಂಗಡಿ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಪ್ರಮೀಳಾ ವಂದಿಸಿದರು.

Sneha Gowda

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

36 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

50 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

1 hour ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

1 hour ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

1 hour ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

2 hours ago