Categories: ಮಂಗಳೂರು

ಬೆಳ್ತಂಗಡಿ: ವಿಶ್ವಕ್ಕೆ ಶಾಂತಿಯ ಸಂದೇಶ ಕೊಟ್ಟವರು ಯೇಸು ಸ್ವಾಮಿ- ಡಾ. ರಾಧಾಕೃಷ್ಣ ಶೆಟ್ಟಿ

ಬೆಳ್ತಂಗಡಿ, ಡಿ.26: ವಿಶ್ವಕ್ಕೆ ಶಾಂತಿಯ ಸಂದೇಶ ಕೊಟ್ಟವರು ಯೇಸು ಸ್ವಾಮಿ. ಕ್ರೈಸ್ತರು ಶಾಂತಿ ಪ್ರಿಯರು. ವಿಶ್ವ ಒಗ್ಗಟ್ಟಾಗಿ ಬಾಳಲು ಶಾಂತಿ ಅತ್ಯವಶ್ಯಕವಾಗಿದೆ ಎಂದು ಮೂಡುಬಿದ್ರೆ ಮಹಾವೀರ ಕಾಲೇಜು ಪ್ರಾಂಶುಪಾಲ ಡಾ| ರಾಧಾಕೃಷ್ಣ ಶೆಟ್ಟಿ ಹೇಳಿದರು.

ಅಂತರ್ ಧರ್ಮೀಯ ಆಯೋಗ ಬೆಳ್ತಂಗಡಿ ವಲಯ ಆಶ್ರಯದಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಚರ್ಚ್, ಐ.ಸಿ.ವೈ.ಎಂ. ಮಡಂತ್ಯಾರು ಘಟಕ ಸಹಯೋಗದೊಂದಿಗೆ ಸೇಕ್ರೆಡ್ ಹಾರ್ಟ್ ಸಭಾಂಗಣದಲ್ಲಿ ನಡೆದ ಕ್ರಿಸ್ಮಸ್ ಸೌಹಾರ್ದ ಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶ್ರೀನಿವಾಸ್ ಯುನಿವರ್ಸಿಟಿ ವಿಶ್ವವಿದ್ಯಾನಿಲಯದ ಸಹ ಪ್ರಾಧ್ಯಾಪಕ ಡಾ| ನಿಯಾಜ್ ಪಿ. ಮಾತನಾಡಿ, ಇಸ್ಲಾಂ ಧರ್ಮ ಸಹೋದರತೆಯ ಸಂಕೇತ. ಎಲ್ಲ ಧರ್ಮಗಿಂತಲೂ ರಾಷ್ಟ್ರಧರ್ಮವೆ ಮೇಲು. ಜಾತಿ ಮತ ಪಕ್ಷ ಬೇದ ಭಾವ ಮರೆತು ಒಂದಾಗೋಣ ಎಂದು ಕರೆ ನೀಡಿದರು.

ನೈನಾಡು ಚರ್ಚ್ ಪ್ರಧಾನ ಧರ್ಮಗುರು ಡಾ| ರಾಕಿ ಫೆರ್ನಾಂಡಿಸ್ ಮಾತನಾಡಿ, ತಮ್ಮದೇ ಆದ ಧರ್ಮವನ್ನು ಭಕ್ತಿಯಲ್ಲಿ ಪ್ರತಿಪಾದಿಸಿಕೊಂಡು ಇತರ ಯಾವುದೇ ಜಾತಿ ಧರ್ಮವನ್ನು ಗೌರವಿಸುವುದು ಅತ್ಯವಶ್ಯಕವಾಗಿದೆ ಎಂದು ಹೇಳಿದರು.

ಬೆಳ್ತಂಗಡಿ ವಲಯ ವಿಕರ್ವಾರ್ ಫಾ| ಸ್ವಾಮಿ ಜೋಸೆಫ್ ಕಾರ್ಡೋಜ ಕಾರ್ಯಕ್ರಮ ಉದ್ಘಾಟಿಸಿದರು. ಸೇಕ್ರೆಡ್ ಹಾರ್ಟ್ ಚರ್ಚಿನ ಪ್ರಧಾನ ಧರ್ಮ ಗುರುಗಳಾದ ಫಾ| ಸ್ವಾಮಿ ಬೇಸಿಲ್ ವಾಸ್ ಅಧ್ಯಕ್ಷತೆ ವಹಿಸಿದ್ದರು.

ಮಡಂತ್ಯಾರು ಆಶಾ ದೀಪ ಸುಪೀರಿಯರ್ ಫಾ| ಜೋಸೆಫ್ ಡಿಸೋಜಾ, ಸೇಕ್ರೆಡ್ ಹಾರ್ಟ್ ಚರ್ಚ್ ಸಹಾಯಕ ಧರ್ಮಗುರು ಫಾ| ವಿಲಿಯಮ್ ಡಿಸೋಜ, ಸೇಕ್ರೆಡ್ ಹಾರ್ಡ್ ಪ.ಪೂ. ಕಾಲೇಜು ಪ್ರಾಂಶುಪಾಲ ಫಾ| ಜೆರೊಮ್ ಡಿಸೋಜಾ, ಆಂಗ್ಲಮಾಧ್ಯಮ ಶಾಲೆ ಮುಖ್ಯೋಪಾಧ್ಯಾಯ ಫಾ| ದೀಪಕ್ ಡೇಸಾ, ಚರ್ಚ್ ಪಾಲನಾ ಮಂಡಳಿ ಕಾರ್ಯದರ್ಶಿ ಜೆರಾಲ್ಡ್ ಮೋರಸ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಲಿಯೋ ರೊಡ್ರಿಗಸ್ ಸ್ವಾಗತಿಸಿದರು, ಜೆರಾಲ್ಡ್ ಮೊರಸ್ ವಂದಿಸಿದರು. ವಿವೇಕ್ ವಿ. ಪೈಸ್ ಕಾರ್ಯಕ್ರಮ ನಿರೂಪಿಸಿದರು.

ಸಂಜೆ ಮಡಂತ್ಯಾರು ಪೇಟೆಯಿಂದ‌ ಕ್ರಿಸ್ ಮಸ್ ಸಾಂತಕ್ಲೋಸ್ ಮೆರವಣಿಗೆ ನಡೆಯಿತು. ಕ್ರಿಸ್ ಮಸ್ ಸಾಂಸ್ಕೃತಿಕ ಸಂಜೆ ಮತ್ತು ಪಂಡ ಕೇನುಜೆರ್ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಂಡಿತು.

 

Gayathri SG

Recent Posts

ಬೀದರ್‌ನಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ

ಬೀದರ್‌ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…

5 mins ago

ಕೈ ತಪ್ಪಿದ ವಿಧಾನಪರಿಷತ್ ಟಿಕೆಟ್: ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾ‌ನ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ…

21 mins ago

ಇಂದು ದಾದಿಯರ ದಿನ; ದಣಿವರಿಯಿಲ್ಲದೆ ಕೆಲಸ ಮಾಡುವ ದಾದಿಯರಿಗೊಂದು ಸಲಾಂ

ಪ್ರಪಂಚದಾದ್ಯಂತ ಮೇ 12ರಂದು ಅಂತರಾಷ್ಟ್ರೀಯ ದಾದಿಯರ ದಿನ ವನ್ನಾಗಿ ಆಚರಿಸಲಾಗುತ್ತದೆ. ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಗೌರವಾರ್ಥವಾಗಿ ವಿಶ್ವಾದ್ಯಂತ ಅಂತರರಾಷ್ಟ್ರೀಯ…

32 mins ago

ಜೈಲಿನಲ್ಲೇ ಹೃದಯಾಘಾತವಾಗಿ ಕೈದಿ ಮೃತ್ಯು

ವಿಚಾರಣಾಧೀನ ಕೈದಿಯೋರ್ವ ಜೈಲಿನಲ್ಲೇ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹಿರಿಯಡಕ ಸಬ್ ಜೈಲಿನಲ್ಲಿ ನಡೆದಿದೆ.

37 mins ago

ಎಕ್ಸಾಂನಲ್ಲಿ ಫೇಲ್‌ : ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ಫೇಲ್‌ ಆಗಿದ್ದೇನೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. . ಫೇಲ್ ಆದ ವಿಚಾರ ಪೋಷಕರಿಗೆ…

1 hour ago

29ನೇ ಬಾರಿ ಮೌಂಟ್‌ ಎವರೆಸ್ಟ್‌ ಏರಿದ ಕಮಿ ರೀಟಾ ಶೆರ್ಪಾ

ಎವರೆಸ್ಟ್ ಮ್ಯಾನ್ ಎಂದೇ ಹೆಸರಾಗಿರುವ ನೇಪಾಳದ ಕಮಿ ರೀಟಾ ಶೆರ್ಪಾ 29ನೇ ಬಾರಿ ವಿಶ್ವದ ಅತಿ ಎತ್ತರದ ಪರ್ವತ ಮೌಂಟ್‌…

1 hour ago