News Karnataka Kannada
Monday, May 06 2024
ಮಂಗಳೂರು

ಬೆಳ್ತಂಗಡಿ: ಡಿ.4ರಂದು ಆಯೋಜಿಸಿದ್ದ ಕಬಡ್ಡಿ ಪಂದ್ಯಾಟ ಮುಂದೂಡಿಕೆ

Belthangady: Kabaddi match scheduled to be held on December 4 postponed
Photo Credit : Wikimedia

ಬೆಳ್ತಂಗಡಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಗ್ರಾಮೀಣ ಮತ್ತು ನಗರ ಸಮಿತಿ, ಬೆಳ್ತಂಗಡಿ ವತಿಯಿಂದ ಡಿ.4 ರಂದು ಗುರುನಾರಾಯಣ ಸಭಾಭವನದಲ್ಲಿ ನಡೆಸಲು ಉದ್ದೇಶಿಸಿದ ವಸಂತ ವಿನ್ಯಾಸ ಪುಸ್ತಕ ಬಿಡುಗಡೆ ಸಮಾರಂಭ ಹಾಗೂ ಲಾಯಿಲ ಪ್ರಸನ್ನ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಗ್ರಾಮ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ ಮತ್ತು ಮಹಿಳಾ ಕಾರ್ಯಕರ್ತರಿಗೆ ಆಯೋಜಿಸಲ್ಪಟ್ಟಿದ್ದ ಮುಕ್ತ ಹಗ್ಗ ಜಗ್ಗಾಟ ಸ್ಪರ್ಧೆಗಳ ಉದ್ಘಾಟನೆ ಕಾರ್ಯಕ್ರಮ ಮುಂದೂಡಲಾಗಿದೆ.

ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬರಬೇಕಿದ್ದು, ಅನಿವಾರ್ಯ ಕಾರ್ಯಗಳಿಂದ ಅವರ ವೇಳಾಪಟ್ಟಿಯಲ್ಲಿ ಬದಲಾವಣೆ ಆಗಿದ್ದರಿಂದ ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಶೈಲೇಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು