ಬೆಳ್ತಂಗಡಿ: ಶ್ರೀ ಶಾಸ್ತಾರ ನಾಗ ಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿನಡೆ ಬಳಂಜ ಇಲ್ಲಿ ಅ. 17 ರಂದು ಶ್ರೀ ಚಂಡಿಕಾಯಾಗ ಮತ್ತು ಪರಿವಾರ ದೇವರುಗಳಿಗೆ ಕಲಶಾಭಿಷೇಕ ಸೇವೆಯು ನಡೆಯಿತು.
ಈ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಧಾನಪರಿಷತ್ ಸದಸ್ಯರಾದ ಪ್ರತಾಪ ಸಿಂಹ ನಾಯಕ್ ರವರು ದೇವರ ಸೇವೆಗಳನ್ನು ಶ್ರದ್ಧಾ ಭಕ್ತಿಯಿಂದ ಪ್ರತಿಯೊಬ್ಬರೂ ಮಾಡಿದಾಗ ನಮ್ಮ ಬದುಕು ಆಧ್ಯಾತ್ಮಿಕವಾಗಿ ರೂಪುಗೊಳ್ಳಲು ಸಾಧ್ಯವಿದೆ ಎಂದು ಅಭಿಪ್ರಾಯ ಪಟ್ಟರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಭಾಸ್ಕರ್ ಸಾಲಿಯಾನ್ ಶಿರ್ಲಾಲ್ ರವರು ಹಿಂದೂ ಧರ್ಮದ ರಕ್ಷಣೆಗಾಗಿ ಇಂತಹ ಯಾಗ ಪೂಜೆ ಪುರಸ್ಕಾರಗಳು ಇಂದಿನ ಕಾಲಘಟ್ಟದಲ್ಲಿ ಅಗತ್ಯವಿದೆ ಎಂದು ನುಡಿದರು.
ಶಿವಾಜಿ ಫ್ರೆಂಡ್ಸ್ ಅಧ್ಯಕ್ಷರಾದ ಜಗದೀಶ್ ರೈ ಮಾತನಾಡಿ ಇಂದಿನ ಯುವಜನತೆ ಕೋಳಿ ಅಂಕ ಜೂಜು ಮದ್ಯಪಾನ ಮುಂತಾದ ದುಷ್ಟಟಗಳಿಗೆ ಬಲಿಯಾಗುತ್ತಿದ್ದಾರೆ. ಇದರಿಂದ ಹೊರ ಬಂದು ನೆಮ್ಮದಿಯ ಜೀವನ ನಡೆಸಬೇಕಾದರೆ ದೇವಸ್ಥಾನಕ್ಕೆ ಭೇಟಿ ನೀಡುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಅಭಿಪ್ರಾಯ ಪಟ್ಟರು.
ಸಮಾಜ ಸೇವಕರಾದ ವಿಶ್ವನಾಥ್ ಹೊಳ್ಳ,ಬಳಂಜ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸುರೇಶ್ ಶೆಟ್ಟಿ ,ಬಳಂಜ ಬಿಲ್ಲವ ಸಂಘದ ಅಧ್ಯಕ್ಷರಾದ ಪ್ರವೀಣ್ ಕುಮಾರ್,ಸತೀಶ್ ರೈ ಬಾರ್ಧಡ್ಕ, ಪ್ರಕಾಶ್ ದುಬೈ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಕ್ಷೇತ್ರದ ಧರ್ಮದರ್ಶಿ ಜಯ ಸಾಲಿಯಾನ್ ಸ್ವಾಗತಿಸಿದರು. ಸದಾನಂದ ಸಾಲಿಯಾನ್ ಬಳಂಜ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಸಲ್ಲಿಸಿದರು.
ವಿದ್ವಾನ್ ಶಶಾಂಕ್ ಭಟ್ ಇವರ ನೇತೃತ್ವದಲ್ಲಿ ಚಂಡೀಕಯಾಗದ ಪೂರ್ಣಾಹುತಿ ನಡೆಯಿತು. ಜಿತೇಂದ್ರ ಶೆಟ್ಟಿ ಕಾರ್ಯನ ಮತ್ತು ಬಳಗದವರಿಂದ ಭಜನಾ ಸೇವೆ ಮತ್ತು ಪಂಚಶ್ರೀ ಮಹಿಳಾ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಸೇವೆ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ಮತ್ತು ಸಂಜೆ ರಂಗಪೂಜೆ ನೆರವೇರಿತು.ಅತ್ಯಧಿಕ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.