News Karnataka Kannada
Sunday, April 28 2024
ಮಂಗಳೂರು

ಬೆಳ್ತಂಗಡಿ: ಕೆಂಪೇಗೌಡ ಜಯಂತಿಯ ಆಚರಣೆ

Kempegowda Jayanti celebrations
Photo Credit :

ಬೆಳ್ತಂಗಡಿ: ತಾಲೂಕು ಕಾಲ ಭೈರವೇಶ್ವರ ಒಕ್ಕಲಿಗ ಗೌಡರ ಸಂಘ ಹಾಗೂ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಸೌಹಾರ್ದ ಸಹಕಾರಿಯ ಸಂಯುಕ್ತ ಆಶ್ರಯದಲ್ಲಿ ಜೂ.27 ರಂದು ಉಜಿರೆಯ ಎಸ್. ಪಿ ಆಯಿಲ್ ಮಿಲ್ ಸಭಾಂಗಣದಲ್ಲಿ ಕೆಂಪೇಗೌಡ ಜಯಂತಿಯ ಆಚರಣೆ ನಡೆಯಿತು.

ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಕೇರಿಮಾರು ಬಾಲಕೃಷ್ಣ ಗೌಡರು ಅಧ್ಯಕ್ಷತೆ ವಹಿಸಿ ಕೆಂಪೇಗೌಡರ ಮೇರು ವ್ಯಕ್ತಿತ್ವ ಹಾಗೂ ಆದರ್ಶಗಳು ಇಂದಿನ ಕಾಲಘಟ್ಟದಲ್ಲಿ ಅತ್ಯಂತ ಪ್ರಸ್ತುತವಾಗಿದ್ದು, ಇದನ್ನು ಮೈಗೂಡಿಸಿಕೊಂಡು ನಮ್ಮ ಸಂಘಟನೆಯ ಎಲ್ಲಾ ಕಾರ್ಯಯೋಜನೆಗಳನ್ನು ಸಾಕಾರಾಗೊಳಿಸುವಂತೆ ಕರೆ ಕೊಟ್ಟರು. ಮಹಿಳಾ ವೇದಿಕೆಯ ಕಾರ್ಯದರ್ಶಿ ಗೀತಾ ಚಿದಾನಂದ ಗೌಡ ಇವರು ಕೆಂಪೇಗೌಡರ ಇತಿಹಾಸದ ಮಾಹಿತಿಯನ್ನು ಸವಿಸ್ತಾರವಾಗಿ ಸಭೆಯ ಮುಂದೆ ಇಟ್ಟರು. ಸೌಹಾರ್ದ ಸಹಕಾರಿಯ ನಿರ್ದೇಶಕ ಎನ್. ಲಕ್ಷ್ಮಣ ಗೌಡ ಬೆಂಗಳೂರು ನಗರ ಕಟ್ಟುವಲ್ಲಿ ಕೆಂಪೇಗೌಡರು ಅನುಸರಿಸಿದ ಮಾರ್ಗ ವಿಧಾನಗಳ ಬಗ್ಗೆ ಬೆಳಕು ಚೆಲ್ಲಿದರು.

ಕಾಲಭೈರವೇಶ್ವರ ಒಕ್ಕಲಿಗ ಗೌಡರ ಸೌಹಾರ್ದ ಸಹಕಾರಿಯ ಅಧ್ಯಕ್ಷ ರಂಜನ್. ಜಿ. ಗೌಡ, ಯುವ ವೇದಿಕೆಯ ಅಧ್ಯಕ್ಷ ಸುಧಾಕರ ಗೌಡ, ಮಹಿಳಾ ವೇದಿಕೆಯ ಅಧ್ಯಕ್ಷೆ ಅಪರ್ಣ ಶಿವಕಾಂತ ಗೌಡರು ಹಾಗೂ ಸೌಹಾರ್ದ ಸಹಕಾರಿಯ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ದಿನೇಶ್ ಗೌಡ ಕಲ್ಲಾಜೆ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಒಕ್ಕಲಿಗ ಗೌಡರ ಸೌಹಾರ್ದ ಸಹಕಾರಿಯ ನಿರ್ದೇಶಕರು, ಸಂಘದ ಪದಾಧಿಕಾರಿಗಳು, ಗ್ರಾಮಸಮಿತಿಗಳ ಪದಾಧಿಕಾರಿಗಳು, ವಿವಿಧ ಗ್ರಾಮಗಳ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಸಂಘದ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಗೌಡ ಕಲ್ಲಾಜೆ ಇವರು ಸ್ವಾಗತಿಸಿದ ಈ ಕಾರ್ಯಕ್ರಮದ ಕೊನೆಯಲ್ಲಿ ಪ್ರಕಾಶ್ ಕುಮಾರ್ ಕೆದ್ಲ ಇವರು ಧನ್ಯವಾದ ಅರ್ಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು