ಬೆಳ್ತಂಗಡಿ: ತಾಲೂಕಿನ ಮಿತ್ತಬಾಗಿಲು ಗ್ರಾಮದ ದಿಡುಪೆ ಪರಾರಿ ಮನೆಯ ಕೇಶವ ವಿ. ಫಡಕೆಯವರು, ಚೈತನ್ಯ ಇಂಟರ್ ನ್ಯಾಷನಲ್ ಆರ್ಟ್ಸ್ ಅಕಾಡೆಮಿ ನೀಡುವ “ಕರ್ನಾಟಕ ಸಮಾಜ ಸೇವಾ ರತ್ನ” ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕೃಷಿಕರಾಗಿರುವ ಅವರು ಸ್ಥಳೀಯವಾಗಿ ಹಾಗೂ ತಾಲೂಕಿನ ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಸಲ್ಲಿಸುತ್ತಿರುವ ವಿಶೇಷ ಸೇವೆಯನ್ನು ಗುರುತಿಸಿ ಅವರಿಗೆ ಪ್ರಶಸ್ತಿಯನ್ನು ನೀಡಲಾಗಿದೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಚೈತನ್ಯ ಇಂಟೆರ್ ನ್ಯಾಷನಲ್ ಆರ್ಟ್ಸ್ ಅಕಾಡೆಮಿ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.